Featured

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯವು ಜೀವನದ ಅತ್ಯಂತ ಪ್ರಮುಖ ಘಟ್ಟ. ಈ ಹಂತದಲ್ಲಿ ಮಕ್ಕಳಲ್ಲಿ ಮಹತ್ತರವಾದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ಶಿಕ್ಷಕರು ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ಸೂಕ್ತ ಗುರಿಗಳನ್ನು ಹಾಕಿಕೊಂಡು ಶಿಸ್ತು ಮತ್ತು ನಿಷ್ಠೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಸಾಧ್ಯ. ವೈಫಲ್ಯಗಳಿಂದ ಹತಾಶರಾಗದೇ ಆತ್ಮವಿಶ್ವಾಸದಿಂದ ಗುರಿಗಳನ್ನು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ವಿದ್ಯಾಗಿರಿಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗದ ಡೀನ್ ಡಾ. ರವಿಪ್ರಸಾದ್ ಹೆಗ್ಡೆ ತಿಳಿಸಿದರು.

ಅವರು ಕುತ್ಯಾರಿನ ಸೂರ್ಯಚೈತನ್ಯ ಹೈಸ್ಕೂಲ್‌ನಲ್ಲಿ ನಡೆದ “ಹದಿಹರೆಯದ ತಲ್ಲಣಗಳು: ಒಂದು ಶೈಕ್ಷಣಿಕ ಸಂವಾದ” ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ತಮ್ಮ ಉಪನ್ಯಾಸದಲ್ಲಿ ಅನೇಕ ಪ್ರಸಿದ್ಧ ವ್ಯಕ್ತಿಗಳ ಉದಾಹರಣೆಗಳನ್ನು ನೀಡಿದ ಡಾ. ಹೆಗ್ಡೆ ಅವರು ಶಿಸ್ತು ಪರಿಪಾಲನೆ
ಹಾಗೂ ಮೌಲ್ಯಾಧಾರಿತ ಜೀವನಕ್ಕೆ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಕರೆಯಿತ್ತರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಎ.ಕೆ. ವಿದ್ಯಾರ್ಥಿ-ಶಿಕ್ಷಕರು- ಪೋಷಕರ ಸಹಭಾಗಿತ್ವದಿಂದ ಯಶಸ್ವಿ ಶಿಕ್ಷಣ ವ್ಯವಸ್ಥೆಯ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಬಹುಮುಖ್ಯ ವಿಷಯದ ಕುರಿತು ಸಂವಾದ ಕಾರ್ಯಕ್ರಮ ಸಂಯೋಜಿಸಿದ ಸೂರ್ಯಚೈತನ್ಯ ವಿದ್ಯಾಸಂಸ್ಥೆಯನ್ನು ಶ್ಲಾಘಿಸಿದ ಅವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು ಶಿರ್ವ ರೋಟರಿ ಕ್ಲಬ್‌ನ ಅಧ್ಯಕ್ಷ ಜಯಕೃಷ್ಣ ಆಳ್ವ, ಕಾರ್ಯದರ್ಶಿ ಜಿನೇಶ್ ಬಲ್ಲಾಳ್, ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಶಂಭುದಾಸ

ಗುರೂಜಿ ಶುಭಹಾರೈಸಿದರು. ಪ್ರಾಂಶುಪಾಲ ಗುರುದತ್ತ ಸೋಮಯಾಜಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ರಾಜಲಕ್ಷಿö್ಮ ಪರಿಚಯಿಸಿದರು. ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿ ಸಂಗೀತಾ ರಾವ್ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago