Featured

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯವು ಜೀವನದ ಅತ್ಯಂತ ಪ್ರಮುಖ ಘಟ್ಟ. ಈ ಹಂತದಲ್ಲಿ ಮಕ್ಕಳಲ್ಲಿ ಮಹತ್ತರವಾದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ಶಿಕ್ಷಕರು ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ಸೂಕ್ತ ಗುರಿಗಳನ್ನು ಹಾಕಿಕೊಂಡು ಶಿಸ್ತು ಮತ್ತು ನಿಷ್ಠೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಸಾಧ್ಯ. ವೈಫಲ್ಯಗಳಿಂದ ಹತಾಶರಾಗದೇ ಆತ್ಮವಿಶ್ವಾಸದಿಂದ ಗುರಿಗಳನ್ನು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ವಿದ್ಯಾಗಿರಿಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗದ ಡೀನ್ ಡಾ. ರವಿಪ್ರಸಾದ್ ಹೆಗ್ಡೆ ತಿಳಿಸಿದರು.

ಅವರು ಕುತ್ಯಾರಿನ ಸೂರ್ಯಚೈತನ್ಯ ಹೈಸ್ಕೂಲ್‌ನಲ್ಲಿ ನಡೆದ “ಹದಿಹರೆಯದ ತಲ್ಲಣಗಳು: ಒಂದು ಶೈಕ್ಷಣಿಕ ಸಂವಾದ” ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ತಮ್ಮ ಉಪನ್ಯಾಸದಲ್ಲಿ ಅನೇಕ ಪ್ರಸಿದ್ಧ ವ್ಯಕ್ತಿಗಳ ಉದಾಹರಣೆಗಳನ್ನು ನೀಡಿದ ಡಾ. ಹೆಗ್ಡೆ ಅವರು ಶಿಸ್ತು ಪರಿಪಾಲನೆ
ಹಾಗೂ ಮೌಲ್ಯಾಧಾರಿತ ಜೀವನಕ್ಕೆ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಕರೆಯಿತ್ತರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಎ.ಕೆ. ವಿದ್ಯಾರ್ಥಿ-ಶಿಕ್ಷಕರು- ಪೋಷಕರ ಸಹಭಾಗಿತ್ವದಿಂದ ಯಶಸ್ವಿ ಶಿಕ್ಷಣ ವ್ಯವಸ್ಥೆಯ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಬಹುಮುಖ್ಯ ವಿಷಯದ ಕುರಿತು ಸಂವಾದ ಕಾರ್ಯಕ್ರಮ ಸಂಯೋಜಿಸಿದ ಸೂರ್ಯಚೈತನ್ಯ ವಿದ್ಯಾಸಂಸ್ಥೆಯನ್ನು ಶ್ಲಾಘಿಸಿದ ಅವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು ಶಿರ್ವ ರೋಟರಿ ಕ್ಲಬ್‌ನ ಅಧ್ಯಕ್ಷ ಜಯಕೃಷ್ಣ ಆಳ್ವ, ಕಾರ್ಯದರ್ಶಿ ಜಿನೇಶ್ ಬಲ್ಲಾಳ್, ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಶಂಭುದಾಸ

ಗುರೂಜಿ ಶುಭಹಾರೈಸಿದರು. ಪ್ರಾಂಶುಪಾಲ ಗುರುದತ್ತ ಸೋಮಯಾಜಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ರಾಜಲಕ್ಷಿö್ಮ ಪರಿಚಯಿಸಿದರು. ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿ ಸಂಗೀತಾ ರಾವ್ ವಂದಿಸಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

20 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

22 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

23 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

23 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

23 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

23 hours ago