ಬೆಂಗಳೂರು: ‘ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ?’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್–ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ಪ್ರಕಟಿಸಿದ್ದಾರೆ.
‘ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯಗಳಲ್ಲಿ ಜೆಡಿಎಸ್ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೇ ಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ನೇರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
’ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು. ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?‘ ಎಂದು ಟ್ವೀಟಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…