ಬೆಂಗಳೂರು: ‘ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ?’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್–ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ಪ್ರಕಟಿಸಿದ್ದಾರೆ.
‘ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯಗಳಲ್ಲಿ ಜೆಡಿಎಸ್ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೇ ಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ನೇರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
’ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು. ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?‘ ಎಂದು ಟ್ವೀಟಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…