ನವದೆಹಲಿ: ವಿವಾಹವು ಎರಡು ಆತ್ಮಗಳನ್ನು ಒಂದುಗೂಡಿಸುವ ಪವಿತ್ರ ಬಂಧವಾಗಿದೆ. ಮದುವೆ ನಂತರ ಬರುವ ಮಧುಚಂದ್ರವು ನವವಿವಾಹಿತ ದಂಪತಿಗಳಿಗೆ ಖಾಸಗಿತನಕ್ಕೆ ಉದಾಹರಣೆಯಾಗಿದೆ. ಅಂದ ಹಾಗೇ ವರನಿಗೆ ಮತ್ತು ಬರುವ ಔಷಧಿ ನೀಡಿ ತನ್ನ ಲವರ್ ಜೊತೆ ಓಡಿ ಹೋದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.
ಸತ್ಯಂ ಎಂದು ಗುರುತಿಸಲಾದ ವರನನ್ನು ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಅಲಿಗಢದ ಗುರುದ್ವಾರ ರಸ್ತೆಯ ನಿವಾಸಿ ನವೆಂಬರ್ನಲ್ಲಿ ಆಗ್ರಾ ಕ್ಯಾಂಟ್ ನಿವಾಸಿ ದೀಪಾಸಿ ಅವರನ್ನು ವಿವಾಹವಾದರು. ಡಿಸೆಂಬರ್ 8, 2022 ರಂದು ಮಧುಚಂದ್ರಕ್ಕಾಗಿ ಉತ್ತರಾಖಂಡಕ್ಕೆ ತಮ್ಮ ಹೆಂಡತಿಯೊಂದಿಗೆ ತೆರಳಿದ್ದರು. ನವವಿವಾಹಿತ ದಂಪತಿಗಳು ಡಿಸೆಂಬರ್ 9 ರಂದು ಹೃಷಿಕೇಶಕ್ಕೆ ಹೋಗಿ ಬಸ್ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದರು. ಈ ನಡುವೆ ಹೋಟೆಲ್ ನಲ್ಲಿ ಚಹಕುಡಿದ ಬಳಿಕ ಸತ್ಯಂ ಪ್ರಜ್ಞೆ ಕಳೆದುಕೊಂಡ ಎನ್ನಲಾಗಿದೆ. ಈ ನಡುವೆ ನಂತರ, ದೀಪಾಸಿ ತನ್ನ ಸಾಮಾನು ಸರಂಜಾಮುಗಳನ್ನು ಪ್ಯಾಕ್ ಮಾಡಿ ತನ್ನ ಬ್ಯಾಗ್ ಮತ್ತು ಹಣದೊಂದಿಗೆ ಹೋಟೆಲ್ ನಿಂದ ಗೆಳೆಯನ ಜೊತೆಗೆ ಓಡಿ ಹೋಗಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸತ್ಯಂಗೆ ಪ್ರಜ್ಞೆ ಮರಳಿದಾಗ, ಹೋಟೆಲ್ ಸಿಬ್ಬಂದಿಯಿಂದ ತನ್ನ ಹೆಂಡತಿಯ ಬಗ್ಗೆ ವಿಚಾರಿಸಿದಾಗ, ಅವಳು ಸಂಜೆ 7 ಗಂಟೆ ಸುಮಾರಿಗೆ ಹೋಟೆಲ್ನಿಂದ ಹೊರಗೆ ಹೋಗಿದ್ದಾಳೆ ಎನ್ನುವುದನ್ನು ಕಂಡು ಕೊಂಡಿದ್ದಾಳೆ.
ತಕ್ಷಣವೇ, ಅವರು ಈ ವಿಷಯದ ಬಗ್ಗೆ ಪೊಲೀಸರಿಗೆ ದೂರು ನೀಡಿದರು. ತನಿಖೆಯ ನಂತರ, ದೀಪಾಸಿ ಬಸ್ಸಿನಲ್ಲಿ ದೆಹಲಿಗೆ ತೆರಳಿದ್ದಳೆ ಎಂದು ತಿಳಿದುಬಂದಿದೆ. ಸತ್ಯಂ ಈ ಘಟನೆಯ ಬಗ್ಗೆ ಅಲಿಗಢದಲ್ಲಿರುವ ತನ್ನ ಕುಟುಂಬಕ್ಕೆ ಮತ್ತು ಆಗ್ರಾದಲ್ಲಿರುವ ತನ್ನ ಅತ್ತೆ-ಮಾವಂದಿರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಆಕೆಯ ಕುಟುಂಬವು ಗ್ಯಾಂಗ್ಸ್ಟರ್ ಅನ್ಶು ಯಾದವ್ ಎಂಬ ಮತ್ತೊಬ್ಬ ಯುವಕನ ಜೊತೆ ದಿಪಾಸಿಗೆ ಸಂಬಂಧ ಇದೆ. ಆಕೆಯನ್ನು ಮರೆತುಬಿಡುವಂತೆ ಸತ್ಯಂಗೆ ಹೇಳಿದ್ದಾರೆ ಎನ್ನಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…