Featured

ಹನಿ ನೀರಾವರಿ ಸಹಾಯಧನಕ್ಕೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ – Vishwanews24

ಹನಿ ನೀರಾವರಿ ಸಹಾಯಧನಕ್ಕೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ಬೆಂಗಳೂರು : ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ (PMKSY-PDMC). ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಸಹಾಯಧನಕ್ಕಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ಮಾರ್ಗಸೂಚಿಯನ್ವಯ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು. 2 ಹೆಕ್ಟೇರ್‌ಗೆ ಮೇಲ್ಪಟ್ಟು 5 ಹೆಕ್ಟೇರ್‌ವರೆಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ವರೆಗೆ ಸಹಾಯಧನವನ್ನು ನೀಡಲಾಗುವುದು). ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-080-27623770/ 9880210892, ದೇವನಹಳ್ಳಿ-080-27681204/ 9448825101, ಹೊಸಕೋಟೆ-080-27904760/ 8217210320, ನೆಲಮಂಗಲ-080-27726213/ 9880461607 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago