Featured

ಹನುಮಾನ್‌ ಚಾಲೀಸಾ ಪ್ರಕರಣ : ಹಲ್ಲೆಗೊಳಗಾದ ಅಂಗಡಿ ಮಾಲೀಕನ ವಿರುದ್ಧವೇ ಎಫ್‌ಐಆರ್‌ ದಾಖಲು – Vishwanews24

ಹನುಮಾನ್‌ ಚಾಲೀಸಾ ಪ್ರಕರಣ : ಹಲ್ಲೆಗೊಳಗಾದ ಅಂಗಡಿ ಮಾಲೀಕನ ವಿರುದ್ಧವೇ ಎಫ್‌ಐಆರ್‌

ಬೆಂಗಳೂರು: ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ರೋಚಕ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಈಗ  ಎಫ್ ಐ ಆರ್ ದಾಖಲಾಗಿದೆ.

ಘಟನೆ ಸಂಬಂಧ ಅಂದು ಸುಲೈಮನ್ ಎಂಬಾತನ ವಿರುದ್ಧ  ಎಫ್ ಐ ಆರ್ ದಾಖಲಾಗಿತ್ತು. ಈಗ ಮುಖೇಶ್ ಮೇಲೆ ಎಫ್ ಐ ಆರ್ ದಾಖಲು ಮಾಡಲಾಗಿದೆ. ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಕಿರಿಕ್ ಮಾಡ್ತಿದ್ದ ಎಂದು  ಸುಲೈಮನ್ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ನಮಾಜ್‌ ಮಾಡುವ ಸಮಯಕ್ಕೆ ಹನುಮಾನ್‌ ಚಾಲೀಸಾ ಹಾಕಿದ ಎಂಬ ಕಾರಣಕ್ಕೆ ಅನ್ಯಕೋಮಿನ ಕೆಲ ಯುವಕರು ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದಕ್ಕೆ ಹಿಂದೂ ಕಾರ್ಯಕರ್ತರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು. ಸಂಸದರು ಸೇರಿ ಬಿಜೆಪಿ ಕಾರ್ಯಕರ್ತರು ಸೇರಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದ್ದರು.

ಅದು ಕೇವಲ ಒಂದು ಹಲ್ಲೆಗೆ ಇಡೀ ಏರಿಯಾನೇ ಬಂದ್ ಮಾಡಿದ್ದ ಕೇಸ್ ಆಗಿತ್ತು. ಸಾವಿರಾರು ಮಂದಿಯ ಪ್ರತಿಭಟನೆಗೆ  ಪೊಲೀಸ್ ಪಡೆ ದಂಗಾಗಿತ್ತು. ರಾತ್ರೋ ರಾತ್ರಿ ಆರೋಪಿಗಳ ಬಂಧನಕ್ಕಾಗಿ ಆ ಪ್ರತಿಭಟನೆ ನಡೆದಿತ್ತು.

ಇದೀಗ ನಗರತ್ ಪೇಟೆಯಲ್ಲಿ ಹನುಮಾ ಚಾಲಿಸ ಹಾಡು ಹಾಕಿದ್ದಕ್ಕೆ ಹಲ್ಲೆ ಕೇಸ್ ಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗೊಳಗಾದ ಮುಖೇಶ್ ವಿರುದ್ದವೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಬಂಧಿತ ಆರೋಪಿ ಸುಲೇಮಾನ್ ತಂದೆ ನೀಡಿದ ದೂರಿನ ಅನ್ವಯ ನ್ಯಾಯಾಲಯದ ಸೂಚನೆ ಮೇರೆಗೆ  ಎಫ್‌ಐಆರ್‌ ದಾಖಲಾಗಿದೆ.

ರಂಜಾನ್ ಹಬ್ಬದ ಹಿನ್ನಲೆ ಪ್ರಾರ್ಥನೆ ಇದ್ದರೂ ಜೋರಾಗಿ ಮುಖೇಶ್ ಸ್ಪೀಕರ್‌ನಲ್ಲಿ ಹಾಡು ಹಾಕುತ್ತಿದ್ದ. ನಾಲ್ಕೈದು ದಿನದಂತೆ ಒಂದೇ ಸಮಯಕ್ಕೆ ಹಾಡುಗಳನ್ನು ಹಾಕಿ ಜೋರಾಗಿ ಸ್ಪೀಕರ್ ಇಟ್ಟಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್ ಗೆ ಈ ಬಗ್ಗೆ  ಪ್ರಶ್ನಿಸಿದ್ದು ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗ್ತಾರೆ. ಯಾಕಿಷ್ಟು ಸೌಂಡ್ ಇಟ್ಟು ಹಾಡುಗಳನ್ನ ಹಾಕ್ತೀಯಾ ಎಂದು ಪ್ರಶ್ನೆ ಮಾಡಿದ್ರಂತೆ, ಇದರ ಬೆನ್ನಲ್ಲೇ ಮುಖೇಶ್ ತನ್ನ ಮಗನ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

21 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago