ವಿಜಯಪುರ: ದೇಶದೆಲ್ಲೆಡೆ ಜಾತಿ ಹೆಸರಲ್ಲಿ ಮತೀಯ ಸಂಘರ್ಷಗಳೇ ವಿಜೃಂಭಿಸಿ, ಸುದ್ದಿಯಾಗುತ್ತಿವೆ. ಈ ಹಂತದಲ್ಲೇ ಬಸವ ಜನ್ಮಭೂಮಿ ಮುಸ್ಲಿಂ ಭಕ್ತನೊಬ್ಬ ಹನುಮ ಮಾಲಾ ಧರಿಸಿ ಹನುಮ ಜನ್ಮಭೂಮಿ ಅಂಜನಾದ್ರಿ ಬೆಟ್ಟಕ್ಕೆ ಹೊರಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.
ಬಸವೇಶ್ವರ ಜನ್ಮಭೂಮಿಯಾದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಜಾಫರ್ ಬೆಣ್ಣೆ ಎಂಬವರೇ ಭಾವೈಕ್ಯತೆ ಮೆರೆದ ಹನುಮಭಕ್ತ. ಹಣೆಗೆ ಗಂಧ, ತಿಲಕ ಇರಿಸಿ, ಕೇಸರಿ ವಸ್ತ್ರ ಧರಿಸಿ, ಕೊರಳಲ್ಲಿ ಹನುಮ ಮಾಲಾ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಜಾತಿಗಿಂತ ಭಾವೈಕ್ಯತೆ ದೊಡ್ಡದು ಎನ್ನುತ್ತಾರೆ.
ಹನುಮ ಮಾಲೆ ಧರಿಸಿರುವ ಜಾಫರ್ ಉತ್ತರ ಕರ್ನಾಟಕದ ಪ್ರಸಿದ್ದ ಹಾಗೂ ಹನುಮ ಜನ್ಮಭೂಮಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದಾರೆ. ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಮಾಲಾಧಾರ ವ್ರತ ಮುಕ್ತಾಯ ಮಾಡುವುದಾಗಿ ಜಾಫರ್ ಹೇಳುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…