ಬೆಂಗಳೂರು : ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು ಎಂದು ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಪ್ರಸಾದ್ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಬದಲಾಗಿದೆ ಎಂದಿದ್ದಾರೆ.
ಶತ್ರು ರಾಷ್ಟ್ರ ಪಾಕಿಸ್ತಾನವು ಭಾರತದ ವಿರುದ್ಧ 4 ಯುದ್ಧಗಳನ್ನು ಮಾಡಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಸದಾ ತೊಡಗಿಕೊಂಡಿದ್ದು, ನಮ್ಮ ಯೋಧರ ಮೇಲೆ ದಾಳಿ ನಡೆಸುತ್ತಿದೆ. ಕಾಶ್ಮೀರ ವಿಚಾರದಲ್ಲಿ ಪಟ್ಟುಬಿಡದೆ ಹಟ ಸಾಧಿಸುತ್ತಿದೆ. ಭಯೋತ್ಪಾದನೆಗೆ ನಿರಂತರವಾಗಿ ಕುಮ್ಮಕ್ಕು ನೀಡುತ್ತಿದೆ. ಇಷ್ಟಾಗಿಯೂ ಬಿಕೆ ಹರಿಪ್ರಸಾದ್ ಅವರು ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಪರಿಗಣಿಸುವುದಿಲ್ಲ. ಇದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೋಭಾ ಕರಂದ್ಲಾಜೆ ಎಕ್ಸ್ ಸಂದೇಶ
ಪಾಕಿಸ್ತಾನದ ಬೆದರಿಕೆ ಮತ್ತು ಆಕ್ರಮಣದಿಂದ ಭಾರತ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸಲು ಮಾಡಬೇಕಾಗಿ ಬಂದಿದ್ದ ತ್ಯಾಗ ಅಷ್ಟಿಷ್ಟಲ್ಲ. ಅದಕ್ಕಾಗಿ ತ್ಯಾಗ ಮಾಡಿದವರನ್ನು ಕೀಳಾಗಿ ಕಾಣುವುದು ಬೇಡ. ನಮ್ಮ ನೆಮ್ಮದಿಯ ನಿದ್ದೆಗೆ ಆ ಧೈರ್ಯಶಾಲಿ ಆತ್ಮಗಳ ತ್ಯಾಗ ಕಾರಣವಾಗಿದೆ. ಇದೀಗ ಮುಖವಾಡ ಕಳಚಿದೆ. ಕಾಂಗ್ರೆಸ್ನ ನಿಜವಾದ ಬಣ್ಣ ಬಯಲಾಗಿದೆ ಎಂದು ಶೋಭಾ ಹೇಳಿದ್ದಾರೆ.
ಬಿಕೆ ಹರಿಪ್ರಸಾದ್ ಹೇಳಿದ್ದೇನು?
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ, ವಿಧಾನ ಪರಿಷತ್ ಕಪಾಲದಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನವು ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು. ಆದರೆ, ಕಾಂಗ್ರೆಸ್ಗೆ ಅಲ್ಲ. ನಮಗೆ ಅದು ನೆರೆ ರಾಷ್ಟ್ರ ಅಷ್ಟೇ ಎಂದು ಹರಿಪ್ರಸಾದ್ ಹೇಳಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…