ನವದೆಹಲಿ: ಹರಿಯಾಣ ಕಾಂಗ್ರೆಸ್ನ ಮಾಜಿ ನಾಯಕ ಕುಲದೀಪ್ ಬಿಷ್ಣೋಯಿ ಅವರು ತಮ್ಮ ಪತ್ನಿ ರೇಣುಕಾ ಬಿಷ್ಣೋಯಿ ಅವರೊಂದಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.
ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮಗನಾಗಿರುವ ಕುಲದೀಪ್ ಬಿಷ್ಣೋಯಿ, ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಪತ್ನಿ ರೇಣುಕಾ ಕೂಡ ಮಾಜಿ ಶಾಸಕಿ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಷ್ಣೋಯಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಮುಖ್ಯಮಂತ್ರಿ ಖಟ್ಟರ್, ಬಿಷ್ಣೋಯಿ ಸೇರ್ಪಡೆಯು ಸಂಘಟನೆಗೆ ಬಲ ತುಂಬಲಿದೆ ಎಂದು ಹೇಳಿದ್ದಾರೆ.
ಬಿಷ್ಣೋಯಿ ಅವರು ಕಾಂಗ್ರೆಸ್ ಶಾಸಕರಾಗಿದ್ದರೂ, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ ಎಂದೂ ಖಟ್ಟರ್ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಮೋದಿ ‘ಶ್ರೇಷ್ಠ ಪ್ರಧಾನಿ’ ಎಂದು ಶ್ಲಾಘಿಸಿದ ಬಿಷ್ಣೋಯಿ, ಸದಾ ದೇಶ ಮತ್ತು ಬಡವರ ಕಲ್ಯಾಣದ ಬಗ್ಗೆ ಚಿಂತಿಸುವ ಅವರನ್ನು (ಮೋದಿಯವರನ್ನು) ‘ಭಾರತದ ಅತ್ಯುತ್ತಮ ಪ್ರಧಾನಿ’ ಎಂದು ವರ್ಣಿಸಿದರೆ ತಪ್ಪಾಗುವುದಿಲ್ಲ ಎಂದು ಹೊಗಳಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…