ನವದೆಹಲಿ: ಹರಿಯಾಣ ಕಾಂಗ್ರೆಸ್ನ ಮಾಜಿ ನಾಯಕ ಕುಲದೀಪ್ ಬಿಷ್ಣೋಯಿ ಅವರು ತಮ್ಮ ಪತ್ನಿ ರೇಣುಕಾ ಬಿಷ್ಣೋಯಿ ಅವರೊಂದಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.
ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮಗನಾಗಿರುವ ಕುಲದೀಪ್ ಬಿಷ್ಣೋಯಿ, ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಪತ್ನಿ ರೇಣುಕಾ ಕೂಡ ಮಾಜಿ ಶಾಸಕಿ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಷ್ಣೋಯಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಮುಖ್ಯಮಂತ್ರಿ ಖಟ್ಟರ್, ಬಿಷ್ಣೋಯಿ ಸೇರ್ಪಡೆಯು ಸಂಘಟನೆಗೆ ಬಲ ತುಂಬಲಿದೆ ಎಂದು ಹೇಳಿದ್ದಾರೆ.
ಬಿಷ್ಣೋಯಿ ಅವರು ಕಾಂಗ್ರೆಸ್ ಶಾಸಕರಾಗಿದ್ದರೂ, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ ಎಂದೂ ಖಟ್ಟರ್ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಮೋದಿ ‘ಶ್ರೇಷ್ಠ ಪ್ರಧಾನಿ’ ಎಂದು ಶ್ಲಾಘಿಸಿದ ಬಿಷ್ಣೋಯಿ, ಸದಾ ದೇಶ ಮತ್ತು ಬಡವರ ಕಲ್ಯಾಣದ ಬಗ್ಗೆ ಚಿಂತಿಸುವ ಅವರನ್ನು (ಮೋದಿಯವರನ್ನು) ‘ಭಾರತದ ಅತ್ಯುತ್ತಮ ಪ್ರಧಾನಿ’ ಎಂದು ವರ್ಣಿಸಿದರೆ ತಪ್ಪಾಗುವುದಿಲ್ಲ ಎಂದು ಹೊಗಳಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…