ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಏತನ್ಮಧ್ಯೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದಕ್ಕೆ ಕಾರಣವಾಗುತ್ತಿರುವುದು ಈ ಬಾರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕುವುದು ಅನುಮಾನ ಮೂಡಿಸಿದೆ. ಬಿಜೆಪಿ 40 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ (ಜನನಾಯಕ್ ಜನತಾ ಪಕ್ಷ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಜೆಜೆಪಿ ಸ್ಥಾಪಕ ದುಶ್ಯಂತ್ ಚೌಟಾಲಾ ಇದೀಗ ಯಾರೇ ಸರಕಾರ ರಚನೆ ಮಾಡುವುದಿದ್ದರೂ ಅದರ ಕೀಲಿ ಕೈ ನಮ್ಮ ಬಳಿ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ ನಮಗೆ ಯಾರು ಮುಖ್ಯಮಂತ್ರಿ ಸ್ಥಾನ ಕೊಡುತ್ತಾರೋ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಚೌಟಾಲಾ ಆಫರ್ ನೀಡಿದ್ದಾರೆ.
ಮತ್ತೊಂದೆಡೆ ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಜತೆ ಕಾಂಗ್ರೆಸ್ ಪಕ್ಷ ನಿರಂತರ ಸಂಪರ್ಕದಲ್ಲಿದ್ದು, ಡಿಸಿಎಂ ಹುದ್ದೆ ಕೊಡುವುದಾಗಿ ತಿಳಿಸಿದ್ದು, ಮಾತುಕತೆ ಮುಂದುವರಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಹರಿಯಾಣದಲ್ಲಿ ಸರಕಾರ ರಚನೆ ಮಾಡಲು 45 ಸ್ಥಾನಗಳ ಅಗತ್ಯವಿದೆ. ಬಿಜೆಪಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ, ಜೆಜೆಪಿ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನ ಹೊಸ್ತಿಲಿನಲ್ಲಿದೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…