ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ತಂತ್ರ ಹೆಣೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಜನನಾಯಕ್ ಜನತಾ ಪಕ್ಷ(ಜೆಜೆಪಿ)ದ ನಾಯಕ ದುಶ್ಯಂತ್ ಚೌಟಾಲಾ ಅವರನ್ನು ಸೆಳೆಯಲು ಯತ್ನಿಸುತ್ತಿದೆ. ಬಿಜೆಪಿಯು ಸಹ ಗುರುವಾರ ಚೌಟಾಲಾ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಚೌಟಾಲಾ ಅವರು ಮುಖ್ಯಮಂತ್ರಿ ಹುದ್ದೆ ನೀಡುವವರಿಗೆ ತಮ್ಮ ಬೆಂಬಲ ಎಂದು ಪಟ್ಟು ಹಿಡಿದ್ದಾರೆ.
ನಿನ್ನೆ ಚೌಟಾಲಾ ಅವರನ್ನು ಎರಡೂ ರಾಜಕೀಯ ಪಕ್ಷಗಳ ನಾಯಕರು ಸಂಪರ್ಕಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಚೌಟಾಲಾ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಇಂದು ತಮ್ಮ ನಿರ್ಧಾರ ತಿಳಿಸುವುದಾಗಿ ಗುರುವಾರ ಹೇಳೀದ್ದರು. ಇದೀಗ ಭಾರೀ ಬೆಳವಣಿಗೆ ನಡೆದಿದ್ದು, 8 ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ಹರ್ಯಾಣದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಹರ್ಯಾಣ ರಾಜಕೀಯ ದಂಗಲ್ಗೆ ತೆರೆ ಬಿದ್ದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…