Featured

ಹರ್ಯಾಣ ವಿಧಾನಸಭಾ ಚುನಾವಣೆ : ಭಾರತದ ಒಲಿಂಪಿಕ್‌ ಕುಸ್ತಿ ಪಟುಗಳಾದ ಯೋಗೇಶ್ವರ್ ದತ್, ಬಬಿತಾ ಫೋಗಟ್ ರನ್ನು ಕಣಕ್ಕಿಳಿಸಿದ ಬಿಜೆಪಿ -Vishwanews24

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಸಿಎಂ ಮನೋಹರ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲಾ, ಕ್ರೀಡಾ ಕ್ಷೇತ್ರದ ಹಲವು ಸಾಧಕರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ನೀಡಿಲಾಗಿದ್ದು, ಕುಸ್ತಿ ಪಟುಗಳಾದ ಯೋಗೇಶ್ವರ್ ದತ್, ಬಬಿತಾ ಪೋಗಟ್ ಹಾಗೂ ಭಾರತದ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್​ಗೆ ಬಿಜೆಪಿ ಟಿಕೆಟ್ ನೀಡಿದೆ.

78 ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಯಲ್ಲಿ ಸೋಮವಾರ ಪ್ರಕಟಿಸಲಾಯಿತು. ಒಲಿಂಪಿಕ್‌ ಕುಸ್ತಿ ಪಟುಗಳಾದ ಯೋಗೇಶ್ವರ ದತ್‌ ಹಾಗೂ ಬಬಿತಾ ಪೋಗಟ್‌, ಇತ್ತೀಚೆಗೆ ಬಿಜೆಪಿ ಸೇರಿದ್ದ ಭಾರತೀಯ ಹಾಕಿ ತಂಡದ ನಾಯಕ ಸಂದೀಪ್‌ ಸಿಂಗ್‌ ಅವರು ಈ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ.

ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರಿಗೆ ಚುನಾವಣೆಗೆ ಟಿಕೆಟ್ ನೀಡಲಾಗಿದ್ದು, 8 ಮಹಿಳೆಯರಿಗೂ ಟಿಕೆಟ್ ಕಲ್ಪಿಸಲಾಗಿದೆ. ಇಬ್ಬರು ಸಚಿವರು, 7 ಶಾಸಕರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಪಕ್ಷದ ಪ್ರಮುಖರು ಭಾನುವಾರ ತಡರಾತ್ರಿಯವರೆಗೂ ಸಭೆ ನಡೆಸಿದ್ದರು. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 47ರಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ 15, ಐಎನ್​ಎಲ್​ಡಿ 19 ಹಾಗೂ ಸ್ಥಳೀಯ ಪಕ್ಷಗಳು ಮತ್ತು ಪಕ್ಷೇತರರು 9 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

 

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

2 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

7 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

13 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

19 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago