ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ – Vishwanews24

Featured, ರಾಜ್ಯ ನ್ಯೂಸ್

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ಕಲಬುರಗಿ: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದಿದೆ.

ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24 

Leave a Reply