ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಎರಡನೇ ಕಂತು ವಿಳಂಬವಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
”ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಆದರೆ ಎಲ್ಲರಿಗೂ ಹಣ ಸಿಗಲಿದೆ, ಯಾರೂ ತಲೆ ಕೆಡಸಿಕೊಳ್ಳಬೇಡಿ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
”ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಮತ್ತು ಎಲ್ಲ ಬ್ಯಾಂಕ್ ಗಳ ಸಂಬಂಧಪಟ್ಟವರನ್ನು ಕರೆದು ಸಭೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
”ಸರಕಾರದಿಂದ ಖಾತೆಗೆ ಹಣ ಬರಲು ಈ ಹಿಂದೆ 25ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.
”ತಡವಾದರೂ ಒಮ್ಮೆಯೇ ಎರಡು ಕಂತಿನ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.
”ಆಗಸ್ಟ್ ತಿಂಗಳಿನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇ.100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…