ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಎರಡನೇ ಕಂತು ವಿಳಂಬವಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
”ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಆದರೆ ಎಲ್ಲರಿಗೂ ಹಣ ಸಿಗಲಿದೆ, ಯಾರೂ ತಲೆ ಕೆಡಸಿಕೊಳ್ಳಬೇಡಿ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
”ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಮತ್ತು ಎಲ್ಲ ಬ್ಯಾಂಕ್ ಗಳ ಸಂಬಂಧಪಟ್ಟವರನ್ನು ಕರೆದು ಸಭೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
”ಸರಕಾರದಿಂದ ಖಾತೆಗೆ ಹಣ ಬರಲು ಈ ಹಿಂದೆ 25ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.
”ತಡವಾದರೂ ಒಮ್ಮೆಯೇ ಎರಡು ಕಂತಿನ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.
”ಆಗಸ್ಟ್ ತಿಂಗಳಿನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇ.100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…