ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಎರಡನೇ ಕಂತು ವಿಳಂಬವಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
”ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಆದರೆ ಎಲ್ಲರಿಗೂ ಹಣ ಸಿಗಲಿದೆ, ಯಾರೂ ತಲೆ ಕೆಡಸಿಕೊಳ್ಳಬೇಡಿ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
”ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಮತ್ತು ಎಲ್ಲ ಬ್ಯಾಂಕ್ ಗಳ ಸಂಬಂಧಪಟ್ಟವರನ್ನು ಕರೆದು ಸಭೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
”ಸರಕಾರದಿಂದ ಖಾತೆಗೆ ಹಣ ಬರಲು ಈ ಹಿಂದೆ 25ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.
”ತಡವಾದರೂ ಒಮ್ಮೆಯೇ ಎರಡು ಕಂತಿನ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.
”ಆಗಸ್ಟ್ ತಿಂಗಳಿನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇ.100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…