Featured

ಹಲಾಲ್ ಎನ್ನುವುದು ಒಂದು ಆರ್ಥಿಕ ಜಿಹಾದ್ : ಸಿ.ಟಿ ರವಿ – Vishwanews24

ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು..

ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತ ಒಂದು ಎಕಾನಾಮಿಕ್ ಜಿಹಾದ್..

ಬೆಂಗಳೂರು: ಮುಸ್ಲಿಮರು ಅವರ ದೇವರಿಗೆ ಒಪ್ಪಿಸಿದ ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು ಎಂದು ಶಾಸಕ ಸಿ.ಟಿ ರವಿ ಹೇಳಿದ್ದಾರೆ.

ಹಲಾಲ್ ಮಾಂಸಕ್ಕೆ ಹಿಂದು ಸಂಘಟನೆಗಳು ಬಹಿಷ್ಕಾರ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲಾಲ್ ಮಾಂಸ ಉಪಯೋಗಿಸಿ ಅಂತ ಹೇಗೆ ಹೇಳುವ ರೈಟ್ಸ್ ಇದೆಯೋ ಹಾಗೇ. ಅದನ್ನ ಬಹಿಷ್ಕಾರಿಸಿ ಅಂತ ಹೇಳುವ ರೈಟ್ಸ್ ನಮಗಿದೆ. ಹಲಾಲ್ ಅಂದರೆ ಮುಸ್ಲಿಂರ ಧಾರ್ಮಿಕ ಕ್ರಿಯೆ. ಅದು ಅವರಿಗೆ ಪ್ರಿಯವಾಗಿರುತ್ತದೆ. ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಅಂತ ಏನಾದರೂ ಇದ್ಯಾ? ಸಮಾರಸ್ಯವನ್ನು ಹೇರುವುದಕ್ಕೆ ಬರುವುದಿಲ್ಲ. ಹಾಗಂತ ಸಮಾರಸ್ಯ ಒನ್ ವೇ ಅಲ್ಲ, ಅದು ಟೂ ವೇ. ಹಲಾಲ್ ಇಲ್ಲದ ಮಾಂಸ ಅವರು ತಿನ್ನುವುದಕ್ಕೆ ರೆಡಿಯಾದರೆ, ಹಲಾಲ್ ಆಗಿರುವ ಮಾಂಸ ಇವರು ತಿನ್ನುತ್ತಾರೆ. ಈ ಹಿಂದೆ ಇರುವಂತ ನಿಯಮಗಳನ್ನೆಲ್ಲಾ ಈಗಲೂ ಒಪ್ಪಿಕೊಳ್ಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಹಲಾಲ್ ಎನ್ನುವುದು ಒಂದು ಆರ್ಥಿಕ ಜಿಹಾದ್. ಆರ್ಥಿಕ ಜಿಹಾದ್ ಅಂದರೆ ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತ ಒಂದು ಎಕಾನಾಮಿಕ್ ಜಿಹಾದ್ ತರಹ ಉಪಯೋಗಿಸುತ್ತಾರೆ. ಹಲಾಲ್ ಮಾಂಸವನ್ನು ಉಪಯೋಗಿಸಬಾರದು ಅಂದರೆ ತಪ್ಪೇನು? ಹಲಾಲ್ ಮಾಂಸ ಅವರ ದೇವರಿಗೆ ಒಪ್ಪಿಸಿದ್ದು ಅವರಿಗೆ ಪ್ರಿಯ, ನಮ್ಮ ದೇವರಿಗೆ ಎಂಜಲು. ಒಬ್ಬ ಹಿಂದೂ ಮಟನ್ ಸ್ಟಾಲ್ ಇಟ್ಟರೆ ಮುಸ್ಲಿಮರು ಬಂದು ತಗೋತಾರಾ? ಮುಸ್ಲಿಂರ ಅಂಗಡಿಯಲ್ಲಿ ತೆಗೆದುಕೊಳ್ಳಬೇಕು ಅಂತ ನೀವು ಯಾಕೆ ಹೇಳುತ್ತೀರಾ? ಹೇಳುವುದಕ್ಕೆ ಏನು ರೈಟ್ಸ್ ಇದೆ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago