Featured

ಹಲಾಲ್ : ಸತ್ಯವನ್ನು ಮರೆಮಾಚಿ ಇತರ ಧರ್ಮೀಯರನ್ನು ತಿನ್ನಿಸಿ ಅವರನ್ನು ಧರ್ಮಭ್ರಷ್ಟರನ್ನಾಗಿ ಮಾಡುವುದು ಸರಿಯಲ್ಲ  : ರಹೀಂ ಉಚ್ಚಿಲ

ಮುಸ್ಲಿಮೇತರರು ಹಲಾಲ್ ಮಾಂಸದ ಸತ್ಯಾಸತ್ಯತೆಯನ್ನು ಅರಿಯಬೇಕು..

ಹಲಾಲ್ ಎನ್ನುವುದು ಇಸ್ಲಾಂ ನ ಅವಿಭಾಜ್ಯ ಅಂಗ..

ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವನ್ನು ಬಳಸಿ ಭಕ್ಷಣೆ ಮಾಡಬೇಕು ಎನ್ನುವುದು ಜಗತ್ತಿನ ಮುಸ್ಮಿಮರಿಗೆ ಇರುವ ನಿಯಮ..

ಇದು ಯಾವುದೇ ಕಾರಣಕ್ಕೆ ಮುಸ್ಲಿಮೇತರರಿಗೆ ಅನ್ವಯವಾಗುವುದಿಲ್ಲ..

ಮುಸ್ಲಿಮೇತರ ವ್ಯಾಪಾರಿಗಳಿಂದ ಖರೀದಿಸಿ ಸೇವಿಸುವುದೇ ಇದಕ್ಕೆ ಬರುವ ಅತ್ಯುತ್ತಮ ಪರಿಹಾರ..

ಹಲಾಲ್ ಎನ್ನುವುದು ಇಸ್ಲಾಂ ನ ಅವಿಭಾಜ್ಯ ಅಂಗವಾಗಿದೆ, ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವನ್ನು ಬಳಸಿ ಭಕ್ಷಣೆ ಮಾಡಬೇಕು ಎನ್ನುವುದು ಜಗತ್ತಿನ ಮುಸ್ಮಿಮರಿಗೆ ಇರುವ ನಿಯಮವಾಗಿದೆ, ಆದರೆ ಇದು ಯಾವುದೇ ಕಾರಣಕ್ಕೆ ಮುಸ್ಲಿಮೇತರರಿಗೆ ಅನ್ವಯವಾಗುವುದಿಲ್ಲ, ಹೀಗಿದ್ದ ಮೇಲೂ ಸತ್ಯವನ್ನು ಮರೆಮಾಚಿ ಇತರ ಧರ್ಮೀಯರನು ತಿನ್ನಿಸಿ ಅವರನ್ನು ಧರ್ಮಭ್ರಷ್ಟರನ್ನಾಗಿ ಮಾಡುವುದು ಸರಿಯಲ್ಲ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ.

ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವು ತಮಗೆ ಒಪ್ಪಿಗೆ ಇಲ್ಲ ಎಂದಾದಲ್ಲಿ ಸ್ವ ಇಚ್ಛೆಯಿಂದ ಇದನ್ನು ವರ್ಜಿಸಿ ಮುಸ್ಲಿಮೇತರ ವ್ಯಾಪಾರಿಗಳಿಂದ ಖರೀದಿಸಿ ಸೇವಿಸುವುದೇ ಇದಕ್ಕೆ ಬರುವ ಅತ್ಯುತ್ತಮ ಪರಿಹಾರವಾಗಿದೆ.

ಹಲಾಲ್ ನಲ್ಲಿ ಇರುವಂತಹ ನಿಬಂಧನೆಗಳು, ಬಳಸುವ ಪದಗಳು ಮತ್ತು ಅದರ ಅರ್ಥಗಳನ್ನು ಮುಸ್ಲಿಮೇತರರಿಗೆ ತಿಳಿಸುವುದು ಸಮಾಜದ ಕರ್ತವ್ಯವಾಗಿದ್ದು, ಈ ಸತ್ಯಾಸತ್ಯತೆಯನ್ನು ಮರೆಮಾಚಿ ವ್ಯಾಪಾರ ಮಾಡುವುದು ಸರಿಯಾ ಕ್ರಮವಲ್ಲ. ಈ ವಿಚಾರದಲ್ಲಿ ಎರಡು ಸಮಾಜದ ಮುಖಂಡರು ಗಂಭೀರವಾದ ಚರ್ಚೆ ನಡೆಸಿ ಸೂಕ್ತ ಪರಿಹಾರ ಕ್ರಮವನ್ನು ಕಂಡುಕೊಳ್ಳಬೇಕು. ಇದನ್ನು ರಾಜಕೀಯ ಉದ್ದೇಶಕ್ಕೆ ಯಾರು ಬಳಸಿಕೊಳ್ಳಬಾರದು ಎಂದು ರಹೀಂ ಉಚ್ಚಿಲ್ ಉಭಯ ಸಮಾಜದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago