ಬೆಂಗಳೂರು :ಹೋಟೆಲ್ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆ ಬಳಿಯ ಹೋಟೆಲ್ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು.
ಹೀಗಾಗಿ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ಪ್ರಕರಣ ದಾಖಲಿಸಿದ್ದರು.
ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ರಿಕ್ಕಿ ರೈ ಮೇಲೆ ಹಲ್ಲೆ ಮಾಡಿದ್ದಾಗಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ಕೊಡಲಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಎಫ್ಐಆರ್ ದಾಖಲಾಗಿದೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…