Featured

ಹಳೆಯಂಗಡಿ : ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ  – vishwanews24

ಹಳೆಯಂಗಡಿ : ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

ಹಳೆಯಂಗಡಿ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು. ಅವರಿಗೆ 102 ವರ್ಷ ವಯಸ್ಸಾಗಿತ್ತು

ಪುತ್ರ ವಿಶ್ವೇಶ್ವರ ಭಟ್ ಜೊತೆ ವಾಸವಿದ್ದ ಅವರು ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.

ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು ತನ್ನ ಎಂಟನೇ ಪುತ್ರ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರನ್ನು ಅಲ್ಲದೇ ಅಪಾರ ಅಭಿಮಾನಿಗಳನ್ನು ಅಗಲಿರುವರು.

ಇವರು ಗೈದಿರುವ ಜೀವಮಾನ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕಾನೇಕ ಗೌರವಾಭಿನಂದನೆಳು ಪ್ರಾಪ್ತವಾಗಿವೆ. ಇಂದು ಮಧ್ಯಾಹ್ನ 12 ಕ್ಕೆ ಪಕ್ಷಿಕೆರೆಯ ಸ್ವಗೃಹದಲ್ಲಿ ಅಂತ್ಯಕ್ರಿಯೆ ಜರಗಲಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago