ಹಳೆಯಂಗಡಿ: ಇಲ್ಲಿನ ಬೊಳ್ಳೂರಿನ ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಒರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಂದಿರಾ ನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (5 ವ) ಸಾವನ್ನಪ್ಪಿದ್ದು, ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (6 ವ) ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲಿನ ಆಘಾತ ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಡುಪಿ: ಇಂದು ಶಿರೂರು ಮಠಕ್ಕೆ 31 ನೇ ಉತ್ತರಾಧಿಕಾರಿ ಘೋಷಣೆ -Vishwanews24
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…