ಮಲ್ಪೆ: ಶನಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಸುಮಾರು 70-80ರಷ್ಟು ದೋಣಿಗಳು ಮೀನುಗಾರಿಕೆಗೆ ತೆರಳಿದ್ದವು. ಬಹುತೇಕ ದೋಣಿಗಳು ರವಿವಾರ ರಾತ್ರಿಯಿಂದ ಆಳಸಮುದ್ರಕ್ಕೆ ತೆರಳಲು ಸಿದ್ಧವಾಗಿವೆ.
ಕೆಲವು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕ್ಯಾರ್ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮೀನು ಗಾರಿಕೆಗೆ ತೆರಳಿದ ಎಲ್ಲ ಬೋಟುಗಳು ದಡ ಸೇರಿದ್ದವು. ಅದು ಒಮಾನ್ನತ್ತ ಮುಖ ಮಾಡಿದ ಬಳಿಕ ಮೀನುಗಾರಿಕೆ ಆರಂಭಿಸಲು ಸಿದ್ಧತೆ ನಡೆದಿದ್ದರೂ “ಮಹಾ’ ಉಂಟಾಗುವ ಎಚ್ಚರಿಕೆ ಮೀನುಗಾರರನ್ನು ತತ್ತರಿಸುವಂತೆ ಮಾಡಿತ್ತು. ಹವಾಮಾನ ಮತ್ತು ಮೀನುಗಾರಿಕೆ ಇಲಾಖೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿತ್ತು. ಸಮುದ್ರ ಪ್ರಕ್ಷುಬ್ಧಗೊಂಡು ಕೆಲವೆಡೆ ಸಮುದ್ರ ಕೊರೆತ ಕಾಣಿಸಿಕೊಂಡಿತ್ತು.
ಪಶ್ಚಿಮ ಸಮುದ್ರದಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯದಿಂದ ಕರಾವಳಿಯ ಮೀನುಗಾರಿಕೆ ತತ್ತರಿಸಿದೆ. ಈ ಋತುವಿನ ಆರಂಭದಿಂದಲೇ ಸಮಸ್ಯೆಗಳು ಎದುರಾಗಿರುವುದರಿಂದ ನಿರೀಕ್ಷಿತ ಲಾಭ ದೊರೆತಿಲ್ಲ. ಬೋಟುಗಳು ಸಂಪೂರ್ಣ ನಷ್ಟವನ್ನು ಅನುಭವಿಸುತ್ತಿವೆ.
ತೀರದಲ್ಲಿ ಶಾಂತವಾಗಿದ್ದರೂ ಆಳ ಸಮುದ್ರದಲ್ಲಿ ಅಲೆಗಳ ಅಬ್ಬರ ಇರುವ ಸಾಧ್ಯತೆ ಇದೆ. ಇಲಾಖೆಯ ಸೂಚನೆಯನ್ವಯ ಡೀಸೆಲ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಮಲ್ಪೆ ಬಂದರಿನಿಂದ ಶೇ. 20ರಷ್ಟು ಬೋಟುಗಳು ಮೀನುಗಾರಿಕೆಗೆ ತೆರಳಿವೆ.
“ಮಹಾ’ ಚಂಡಮಾರುತದ ಪ್ರಭಾವ ನ. 6ರ ವರೆಗೆ ಇರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲಿಯವರೆಗೂ ಡೀಸೆಲ್ ಪೂರೈಕೆ ನಿಲ್ಲಿಸುವಂತೆ ಬಂಕ್ಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಬಂದರಿನಲ್ಲಿ ನಿರಂತರವಾಗಿ ಘೋಷಣೆ ಮಾಡಲು ಸೂಚನೆ ಕೊಟ್ಟಿದೆ.
-ಗಣೇಶ್ ಕೆ., ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…