ಮಲ್ಪೆ: ಶನಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಸುಮಾರು 70-80ರಷ್ಟು ದೋಣಿಗಳು ಮೀನುಗಾರಿಕೆಗೆ ತೆರಳಿದ್ದವು. ಬಹುತೇಕ ದೋಣಿಗಳು ರವಿವಾರ ರಾತ್ರಿಯಿಂದ ಆಳಸಮುದ್ರಕ್ಕೆ ತೆರಳಲು ಸಿದ್ಧವಾಗಿವೆ.
ಕೆಲವು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕ್ಯಾರ್ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮೀನು ಗಾರಿಕೆಗೆ ತೆರಳಿದ ಎಲ್ಲ ಬೋಟುಗಳು ದಡ ಸೇರಿದ್ದವು. ಅದು ಒಮಾನ್ನತ್ತ ಮುಖ ಮಾಡಿದ ಬಳಿಕ ಮೀನುಗಾರಿಕೆ ಆರಂಭಿಸಲು ಸಿದ್ಧತೆ ನಡೆದಿದ್ದರೂ “ಮಹಾ’ ಉಂಟಾಗುವ ಎಚ್ಚರಿಕೆ ಮೀನುಗಾರರನ್ನು ತತ್ತರಿಸುವಂತೆ ಮಾಡಿತ್ತು. ಹವಾಮಾನ ಮತ್ತು ಮೀನುಗಾರಿಕೆ ಇಲಾಖೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿತ್ತು. ಸಮುದ್ರ ಪ್ರಕ್ಷುಬ್ಧಗೊಂಡು ಕೆಲವೆಡೆ ಸಮುದ್ರ ಕೊರೆತ ಕಾಣಿಸಿಕೊಂಡಿತ್ತು.
ಪಶ್ಚಿಮ ಸಮುದ್ರದಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯದಿಂದ ಕರಾವಳಿಯ ಮೀನುಗಾರಿಕೆ ತತ್ತರಿಸಿದೆ. ಈ ಋತುವಿನ ಆರಂಭದಿಂದಲೇ ಸಮಸ್ಯೆಗಳು ಎದುರಾಗಿರುವುದರಿಂದ ನಿರೀಕ್ಷಿತ ಲಾಭ ದೊರೆತಿಲ್ಲ. ಬೋಟುಗಳು ಸಂಪೂರ್ಣ ನಷ್ಟವನ್ನು ಅನುಭವಿಸುತ್ತಿವೆ.
ತೀರದಲ್ಲಿ ಶಾಂತವಾಗಿದ್ದರೂ ಆಳ ಸಮುದ್ರದಲ್ಲಿ ಅಲೆಗಳ ಅಬ್ಬರ ಇರುವ ಸಾಧ್ಯತೆ ಇದೆ. ಇಲಾಖೆಯ ಸೂಚನೆಯನ್ವಯ ಡೀಸೆಲ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಮಲ್ಪೆ ಬಂದರಿನಿಂದ ಶೇ. 20ರಷ್ಟು ಬೋಟುಗಳು ಮೀನುಗಾರಿಕೆಗೆ ತೆರಳಿವೆ.
“ಮಹಾ’ ಚಂಡಮಾರುತದ ಪ್ರಭಾವ ನ. 6ರ ವರೆಗೆ ಇರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲಿಯವರೆಗೂ ಡೀಸೆಲ್ ಪೂರೈಕೆ ನಿಲ್ಲಿಸುವಂತೆ ಬಂಕ್ಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಬಂದರಿನಲ್ಲಿ ನಿರಂತರವಾಗಿ ಘೋಷಣೆ ಮಾಡಲು ಸೂಚನೆ ಕೊಟ್ಟಿದೆ.
-ಗಣೇಶ್ ಕೆ., ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…