ಡೆಹ್ರಾಡೂನ್:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್ ಗೈಡ್ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ.
13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ -ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್ಗೆ ಅನುಮತಿ ಪಡೆದಿದ್ದರು. 9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ.
ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…