ಡೆಹ್ರಾಡೂನ್:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್ ಗೈಡ್ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ.
13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ -ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್ಗೆ ಅನುಮತಿ ಪಡೆದಿದ್ದರು. 9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ.
ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…