ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24

Featured, ದಕ್ಷಿಣ ಕನ್ನಡ

ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24

ಮಂಗಳೂರು: ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ದುಬೈ – ಮಂಗಳೂರು ವಿಮಾನವೂ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕೊಚ್ಚಿಯಲ್ಲಿ ಇಳಿದ ಘಟನೆ ನಡೆದಿದೆ.

ಈ ಬಗ್ಗೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಎ.ಸಿ.ಕೆ ನಾಯರ್ ಮಾಹಿತಿ ನೀಡಿದ್ದು, ” ದುಬೈ – ಮಂಗಳೂರು ಏರ್ ಇಂಡಿಯಾ ವಿಮಾನವೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಆದರೆ ಮಂಗಳೂರಿನಲ್ಲಿ ವಿಮಾನ ಇಳಿಯಲು ಅನುಕೂಲಕರ ವಾತಾವರಣ ಇಲ್ಲದ ಕಾರಣ, ವಿಮಾನದ ಮಾರ್ಗಬದಲಿಸಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ “ಎಂದು ಮಾಹಿತಿ ನೀಡಿದ್ದಾರೆ.

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ವಿಮಾನದಲ್ಲಿ 118ಮಂದಿ ಪ್ರಯಾಣಿಕರಿದ್ದು, ರಾತ್ರಿ 12.30 ಕ್ಕೆ ಬಜ್ಪೆ ವಿಮಾನ ನಿಲ್ದಾನದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಭಾರೀ ಸಿಡಿಲು ಮಳೆಯ ಕಾರಣ ವಿಮಾನ ಇಳಿಯಲಾಗದೆ ಕೊಚ್ಚಿಯಲ್ಲಿ ಲ್ಯಾಂಡ್ ಆಗಿದೆ.

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಮೋಡ ಮುಸುಕಿದ ಹಾಗೂ ಮಳೆಯ ವಾತಾವರಣವಿದ್ದು, ಸೋಮವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿದ್ದು ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಏ.13ರಿಂದ ಏ.16ರವರೆಗೆ ಭಾರಿ ಮಳೆಯಾಗುವ ಸಂಭವವಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24