ಮಂಗಳೂರು: ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ದುಬೈ – ಮಂಗಳೂರು ವಿಮಾನವೂ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕೊಚ್ಚಿಯಲ್ಲಿ ಇಳಿದ ಘಟನೆ ನಡೆದಿದೆ.
ಈ ಬಗ್ಗೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಎ.ಸಿ.ಕೆ ನಾಯರ್ ಮಾಹಿತಿ ನೀಡಿದ್ದು, ” ದುಬೈ – ಮಂಗಳೂರು ಏರ್ ಇಂಡಿಯಾ ವಿಮಾನವೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಆದರೆ ಮಂಗಳೂರಿನಲ್ಲಿ ವಿಮಾನ ಇಳಿಯಲು ಅನುಕೂಲಕರ ವಾತಾವರಣ ಇಲ್ಲದ ಕಾರಣ, ವಿಮಾನದ ಮಾರ್ಗಬದಲಿಸಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ “ಎಂದು ಮಾಹಿತಿ ನೀಡಿದ್ದಾರೆ.
ಮಂಗಳೂರು : ನೈಟ್ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24
ವಿಮಾನದಲ್ಲಿ 118ಮಂದಿ ಪ್ರಯಾಣಿಕರಿದ್ದು, ರಾತ್ರಿ 12.30 ಕ್ಕೆ ಬಜ್ಪೆ ವಿಮಾನ ನಿಲ್ದಾನದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಭಾರೀ ಸಿಡಿಲು ಮಳೆಯ ಕಾರಣ ವಿಮಾನ ಇಳಿಯಲಾಗದೆ ಕೊಚ್ಚಿಯಲ್ಲಿ ಲ್ಯಾಂಡ್ ಆಗಿದೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಮೋಡ ಮುಸುಕಿದ ಹಾಗೂ ಮಳೆಯ ವಾತಾವರಣವಿದ್ದು, ಸೋಮವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿದ್ದು ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಏ.13ರಿಂದ ಏ.16ರವರೆಗೆ ಭಾರಿ ಮಳೆಯಾಗುವ ಸಂಭವವಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…