Featured

ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24

ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24

ಮಂಗಳೂರು: ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ದುಬೈ – ಮಂಗಳೂರು ವಿಮಾನವೂ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕೊಚ್ಚಿಯಲ್ಲಿ ಇಳಿದ ಘಟನೆ ನಡೆದಿದೆ.

ಈ ಬಗ್ಗೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಎ.ಸಿ.ಕೆ ನಾಯರ್ ಮಾಹಿತಿ ನೀಡಿದ್ದು, ” ದುಬೈ – ಮಂಗಳೂರು ಏರ್ ಇಂಡಿಯಾ ವಿಮಾನವೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಆದರೆ ಮಂಗಳೂರಿನಲ್ಲಿ ವಿಮಾನ ಇಳಿಯಲು ಅನುಕೂಲಕರ ವಾತಾವರಣ ಇಲ್ಲದ ಕಾರಣ, ವಿಮಾನದ ಮಾರ್ಗಬದಲಿಸಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ “ಎಂದು ಮಾಹಿತಿ ನೀಡಿದ್ದಾರೆ.

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ವಿಮಾನದಲ್ಲಿ 118ಮಂದಿ ಪ್ರಯಾಣಿಕರಿದ್ದು, ರಾತ್ರಿ 12.30 ಕ್ಕೆ ಬಜ್ಪೆ ವಿಮಾನ ನಿಲ್ದಾನದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಭಾರೀ ಸಿಡಿಲು ಮಳೆಯ ಕಾರಣ ವಿಮಾನ ಇಳಿಯಲಾಗದೆ ಕೊಚ್ಚಿಯಲ್ಲಿ ಲ್ಯಾಂಡ್ ಆಗಿದೆ.

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಮೋಡ ಮುಸುಕಿದ ಹಾಗೂ ಮಳೆಯ ವಾತಾವರಣವಿದ್ದು, ಸೋಮವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿದ್ದು ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಏ.13ರಿಂದ ಏ.16ರವರೆಗೆ ಭಾರಿ ಮಳೆಯಾಗುವ ಸಂಭವವಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

13 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

13 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

14 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

14 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 hours ago