ಕಟಪಾಡಿ: ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ,ರಾಜ್ಯ ಬಿಜೆಪಿ ನಾಯಕಿ ಗೀತಾಂಜಲಿ ಎಮ್ ಸುವರ್ಣ ಭಾರತ ಲಾಕ್-ಡೌನ್ ಆದ ದಿನದಿಂದ ಪ್ರತಿದಿನ ಮಧ್ಯಾಹ್ನ ಹಸಿವಿನಿಂದ ಬಳಲುತ್ತಿರುವ ಬಡವರಿಗೆ,ನಿರ್ಗತಿಕರಿಗೆ,ಕೂಲಿಕಾರ್ಮಿಕರಿಗೆ ಅನ್ನವನ್ನು ಖುದ್ದಾಗಿ ತಯಾರಿಸುತ್ತಿದ್ದಾರೆ.
ಪ್ರತಿದಿನ ಸುಮಾರು 400 ಮಂದಿಗೆ ಅನ್ನದ ಪೊಟ್ಟನ ತಯಾರಿಸಿ ವಿತರಿಸುತ್ತಿದ್ದು ಸ್ಥಳಿಯ ಯುವಕರು ಸಹಕರಿಸುವ ಮೂಲಕ ವಿತರಣೆ ಕಾರ್ಯ ನಡೆಯುತ್ತಿದೆ.
ಮಾತ್ರವಲ್ಲದೆ ಮನೆಬಾಗಿಲಿಗೆ ಬರುವ ಎಲ್ಲಾ ಬಡ ಕುಟುಂಬಗಳಿಗೆ ಅಕ್ಕಿ ದಿನಸಿ ಪದಾರ್ಥಗಳನ್ನು ವಿತರಿಸಿ ಮಾತೃಹೃದಯ ತೋರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅವರ ಬೆಂಬಲಿಗ ಯುವಕರ ತಂಡವೊಂದು ಔಷಧಿಗಳನ್ನು ಮನೆಬಾಗಿಲಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದು ಧನ ಸಹಾಯ ರೂಪದ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ.
ಈ ಬಗ್ಗೆ ಮಾಧ್ಯಮದ ಜತೆ ಮಾತಾಡಿ ” ಈ ಎಲ್ಲಾ ಕೆಲಸ ಕಾರ್ಯಗಳು ದೇವರ ಸೇವೆ ಎಂಬ ದೃಷ್ಟಿಯಿಂದ ಮಾಡುತ್ತಿದ್ದೇವೆ ಜನರಿಗೆ ಇಂತಹ ಸಂಧರ್ಭದಲ್ಲಿ ಸಹಕಾರ ಮಾಡದೇ ಇದ್ದರೆ ಉಲ್ಲವರು ಇದ್ದರೂ ಏನು ಪ್ರಯೋಜನ,ಅನ್ನದಾನದ ಭಾಗ್ಯ ದೇವರು ಕರುಣಿಸಿದ್ದು ಖುದ್ದಾಗಿ ತಯಾರಿಸಿ ಮನೆಬಾಗಿಲಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದೇವೆ ಇದಕ್ಕೆ ನನ್ನ ಕುಟುಂಬ ವರ್ಗ ಮತ್ತು ಆತ್ಮೀಯರ ಸಹಕಾರ ಇದೆ,ಯಾರು ಬಂದರು ನನ್ನಿಂದಾಗುವ ಸಹಾಯ ಮಾಡಲು ಸದಾಸಿದ್ದ ಎಂದರು”
ಇವರ ಈ ಕಾಯಕದಲ್ಲಿ ಅವರ ಸುಪುತ್ರ ಅಭಿರಾಜ್,ಭಾಜಪ ಕಾರ್ಯಕರ್ತರು ,ವಿವಿಧ ಸಂಘಟನೆಯ ಯುವಕರು ವಿತರಣೆಗೆ ಕೈ ಜೋಡಿಸುತ್ತಿದ್ದಾರೆ.
ಒಟ್ಟಾರೆಯಾಗಿ ಗೀತಾಂಜಲಿ ಸುವರ್ಣ ರು ನಿರ್ಗತಿಕರು ಬಡವರ ಪಾಲಿಗೆ ಅನ್ನಪೂರ್ಣೇಶ್ವರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…