Featured

ಹಸಿರು ಶಾಲು ಗರ್ಜನೆ; ರಾಜ್ಯಾದ್ಯಂತ ರೈತರಿಂದ ಭಾರೀ ಪ್ರತಿಭಟನೆ

ಬೆಂಗಳೂರು: ಸಂಪೂರ್ಣ ಸಾಲಮನ್ನಾಗೆ ಒತ್ತಾಯಿಸಿ ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬೆಂಗಳೂರಿನಲ್ಲಿ ಸಾವಿರಾರು ರೈತರು ಬೃಹತ್‌ ರ್ಯಾಲಿ ನಡೆಸಿ ರಾಜ್ಯದ ರೈತರ ಎಲ್ಲ ಸಾಲಮನ್ನಾ ಮಾಡಬೇಕು ಎಂದು ಒಕ್ಕೊಲರ ಆಗ್ರಹ ಮಾಡಿದರು. ಉಳಿದಂತೆ ಬೆಳಗಾವಿ, ಮಂಡ್ಯ, ಮೈಸೂರು, ಗುಂಡ್ಲುಪೇಟೆ ಸೇರಿದಂತೆ ಹಲವೆಡೆ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿವೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ನಗರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸಿದ್ದ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾವಣೆಗೊಂಡು ನಂತರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ರೈತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ತಳ್ಳಾಟ-ನೂಕಾಟದಲ್ಲಿ ಕೆಲವು ರೈತರಿಗೆ ಸಣ್ಣಪುಟ್ಟ ಗಾಯಗಳೂ ಆಗಿವೆ. ಈ ಸಂದರ್ಭದಲ್ಲಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದವೂ ನಡೆಯಿತು. ಕೆಲವು ರೈತರನ್ನು ಬಂಧಿಸಿ,  ಬಿಡುಗಡೆ ಮಾಡಲಾಯಿತು.

ಮುಖ್ಯಮಂತ್ರಿ ಭೇಟಿ ಮಾಡಿಸುವುದಾಗಿ ಭರವಸೆ ನೀಡಿ ಪೊಲೀಸ್‌ ಅಧಿಕಾರಿಗಳು ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಮುಖಂಡರನ್ನು ಕರೆದೊಯ್ದು ಭೇಟಿ ಮಾಡಿಸದೆ ವಾಪಸ್‌ ಕಳುಹಿಸಿದರು. ಇದರಿಂದ ಮತ್ತಷ್ಟು ಕೆರಳಿದ ರೈತರು ಮತ್ತೆ ಸ್ವಾತಂತ್ರ್ಯ ಉದ್ಯಾನದ ಬಳಿ ಪ್ರತಿಭಟನೆ ನಡೆಸಿ ಸಿಎಂ ಬರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸಂಜೆ ಸಹಕಾರ ಸಚಿವ ಬಂಡೆಪ್ಪ ಕಾಂಶಪುರ್‌, ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿ, ಮುಖ್ಯಮಂತ್ರಿ ಭೇಟಿಗೆ ಸಮಯ ನಿಗದಿಪಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್‌ ಪಡೆಯಲಾಯಿತು.

ಮುಖ್ಯಮಂತ್ರಿಯವರ ಜತೆ ಮಾತುಕತೆ ನಂತರ ನಮ್ಮ ಹೋರಾಟದ ಮುಂದಿನ ರೂಪು-ರೇಷೆ ನಿರ್ಧರಿಸಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದರು.

54 ಸಾವಿರ ಕೋಟಿ ರೂ.ಬೆಳೆೆ ಸಾಲ:
ಬಜೆಟ್‌ಗೂ ಮುನ್ನಾ ರೈತ‌ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ರೈತರ ಸಂಪೂರ್ಣ ಸಾಲಮನ್ನಾದ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈಗ 54 ಸಾವಿರ ಕೋಟಿ ರೂ. ಬೆಳೆೆ ಸಾಲದಲ್ಲಿ ಕೇವಲ 34 ಕೋಟಿ ರೂ. ಸುಸ್ತಿ ಬೆಳೆ ಸಾಲ ಮಾತ್ರಮನ್ನಾ ಮಾಡಿದ್ದಾರೆ. ಹಲವು ಷರತ್ತುಗಳನ್ನು ಹಾಕಿ ರೈತರ ಬೆಳೆ ಸಾಲಮನ್ನಾ ಮಾಡಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ದೂರಿದರು.

ರಾಜ್ಯದ ರೈತರ ಸಾಲ, 1ಲಕ್ಷ 20 ಸಾವಿರ ಕೋಟಿ ರೂ.ಇದೆ. ಇದರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮಿಶ್ರ ಸರ್ಕಾರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಉಳಿದ, 86 ಕೋಟಿ ರೂ.ಗಳನ್ನು ಯಾರು ತೀರಿಸಬೇಕು. ನಾವು ರೈತರ ಪರ ಎಂದು ಅಬ್ಬರಿಸುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂಕಷ್ಟ ದಲ್ಲಿರುವ ರಾಜ್ಯದ ರೈತರ ನೆರವಿಗೆ ಬರಬೇಕು, ಸಂಪೂರ್ಣ ಸಾಲ ಮನ್ನಾ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ರೈತರ ಸಾಲವನ್ನ ಸಂಪೂರ್ಣ ಮನ್ನಾ ಮಾಡುವ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಗಳು ಮತ್ತಷ್ಟು ನಡೆಯಲಿವೆ. ಇದೇ 21ರಂದು ಹಾವೇರಿಯಲ್ಲಿ  ಬೃಹತ್‌ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago