Featured

ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ- ವಿವಾದಾತ್ಮಕ ಹೇಳಿಕೆ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಹಳದಿ ಕಣ್ಣಿನಲ್ಲಿ ನೋಡುತ್ತಿದ್ದಾರೆ. ಈ ಸರ್ಕಾರದ ಯಶಸ್ಸಿನ ಕಾರ್ಯಕ್ರಮವನ್ನು ನೋಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಾವು ಸಾವಿರಾರು ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದೇವೆ. ಈಗಾಗಲೇ 40,000 ಕೋಟಿ ರೂ.ವನ್ನು ಕೊಟ್ಟಿದ್ದೇವೆ. ಆದ್ದರಿಂದ ಅವರಿಗೆ ಇದನ್ನು ಡೈಜೆಸ್ಟ್ ಮಾಡಿಕೊಳ್ಳೋಕೆ ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ..

ಇಂದು ಬ್ಯಾಂಕರ್ಸ್ ಜೊತೆಯೂ ಮಾತನಾಡಿದ್ದೇವೆ. ಅದನ್ನು ಅವರ ಕೈಯಲ್ಲಿ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಅಸೆಂಬ್ಲಿಯಲ್ಲಿ ಯಡಿಯೂರಪ್ಪ ಅವರು, ಯಾವ ಬ್ಯಾಂಕ್ ಅವರು ಅಷ್ಟು ಗ್ಯಾರಂಟಿಯ ಮೇಲೆ ಸಾಲ ಕೊಡುತ್ತಾರೆ ಎಂದು ಕೇಳುತ್ತಿದ್ದರು. ಜೊತೆಗೆ ಬ್ಯಾಂಕ್ ಅವರ ಜೊತೆ ಅವರು ಮಾತನಾಡಿ ಇದು ಯಶಸ್ವಿಯಾಗುತ್ತಿದೆ ಎಂದು ತಿಳಿದ ಮೇಲೆ ಜನರನ್ನು ತಪ್ಪು ದಾರಿಗೆ ಎಳೆದುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಜೆಟ್ ಆಗಿ ಇನ್ನು ಒಂದು ತಿಂಗಳಾಗಿಲ್ಲ. ರೈತರು ಸದ್ಯಕ್ಕೆ ಖುಷಿಯಲ್ಲಿದ್ದಾರೆ. ಇದನ್ನ ತಪ್ಪಿಸಲು ರೈತರಿಗೆ ವಿಷದ ಬೀಜ ಬಿತ್ತುತ್ತಿದ್ದಾರೆ. ಇದು ಇಡೀ ನಮ್ಮ ರಾಜ್ಯ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅತೀ ದೊಡ್ಡ ಮಾರಕ ಅಂತ ಆಕ್ರೋಶದಿಂದ ಹೇಳಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ರಾಮನಗರದಿಂದ ಈ ಪಾದಯಾತ್ರೆ ಆರಂಭವಾಗಿದ್ದು, ಇಂದು ಬೆಂಗಳೂರಿಗೆ ಆಗಮನವಾಗಿದೆ. ಬಿಜೆಪಿ ಹಾಗೂ ರೈತ ಸಂಘಟನೆ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಕೆಂಗೇರಿಯ ಬಂಡೆ ಮಠದಿಂದ ಪಾದಯಾತ್ರೆ ಪ್ರಾರಂಭವಾಗಿ ಮಧ್ಯಾಹ್ನ ಫ್ರೀಡಂ ಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಿದೆ. ಈ ಪಾದಯಾತ್ರೆಯಲ್ಲಿ ನೂರಾರು ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

35 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

42 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

48 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago