Featured

ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ- ವಿವಾದಾತ್ಮಕ ಹೇಳಿಕೆ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಹಳದಿ ಕಣ್ಣಿನಲ್ಲಿ ನೋಡುತ್ತಿದ್ದಾರೆ. ಈ ಸರ್ಕಾರದ ಯಶಸ್ಸಿನ ಕಾರ್ಯಕ್ರಮವನ್ನು ನೋಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಾವು ಸಾವಿರಾರು ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದೇವೆ. ಈಗಾಗಲೇ 40,000 ಕೋಟಿ ರೂ.ವನ್ನು ಕೊಟ್ಟಿದ್ದೇವೆ. ಆದ್ದರಿಂದ ಅವರಿಗೆ ಇದನ್ನು ಡೈಜೆಸ್ಟ್ ಮಾಡಿಕೊಳ್ಳೋಕೆ ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ..

ಇಂದು ಬ್ಯಾಂಕರ್ಸ್ ಜೊತೆಯೂ ಮಾತನಾಡಿದ್ದೇವೆ. ಅದನ್ನು ಅವರ ಕೈಯಲ್ಲಿ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಅಸೆಂಬ್ಲಿಯಲ್ಲಿ ಯಡಿಯೂರಪ್ಪ ಅವರು, ಯಾವ ಬ್ಯಾಂಕ್ ಅವರು ಅಷ್ಟು ಗ್ಯಾರಂಟಿಯ ಮೇಲೆ ಸಾಲ ಕೊಡುತ್ತಾರೆ ಎಂದು ಕೇಳುತ್ತಿದ್ದರು. ಜೊತೆಗೆ ಬ್ಯಾಂಕ್ ಅವರ ಜೊತೆ ಅವರು ಮಾತನಾಡಿ ಇದು ಯಶಸ್ವಿಯಾಗುತ್ತಿದೆ ಎಂದು ತಿಳಿದ ಮೇಲೆ ಜನರನ್ನು ತಪ್ಪು ದಾರಿಗೆ ಎಳೆದುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಜೆಟ್ ಆಗಿ ಇನ್ನು ಒಂದು ತಿಂಗಳಾಗಿಲ್ಲ. ರೈತರು ಸದ್ಯಕ್ಕೆ ಖುಷಿಯಲ್ಲಿದ್ದಾರೆ. ಇದನ್ನ ತಪ್ಪಿಸಲು ರೈತರಿಗೆ ವಿಷದ ಬೀಜ ಬಿತ್ತುತ್ತಿದ್ದಾರೆ. ಇದು ಇಡೀ ನಮ್ಮ ರಾಜ್ಯ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅತೀ ದೊಡ್ಡ ಮಾರಕ ಅಂತ ಆಕ್ರೋಶದಿಂದ ಹೇಳಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ರಾಮನಗರದಿಂದ ಈ ಪಾದಯಾತ್ರೆ ಆರಂಭವಾಗಿದ್ದು, ಇಂದು ಬೆಂಗಳೂರಿಗೆ ಆಗಮನವಾಗಿದೆ. ಬಿಜೆಪಿ ಹಾಗೂ ರೈತ ಸಂಘಟನೆ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಕೆಂಗೇರಿಯ ಬಂಡೆ ಮಠದಿಂದ ಪಾದಯಾತ್ರೆ ಪ್ರಾರಂಭವಾಗಿ ಮಧ್ಯಾಹ್ನ ಫ್ರೀಡಂ ಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಿದೆ. ಈ ಪಾದಯಾತ್ರೆಯಲ್ಲಿ ನೂರಾರು ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago