Featured

ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ- ವಿವಾದಾತ್ಮಕ ಹೇಳಿಕೆ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಹಳದಿ ಕಣ್ಣಿನಲ್ಲಿ ನೋಡುತ್ತಿದ್ದಾರೆ. ಈ ಸರ್ಕಾರದ ಯಶಸ್ಸಿನ ಕಾರ್ಯಕ್ರಮವನ್ನು ನೋಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಾವು ಸಾವಿರಾರು ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದೇವೆ. ಈಗಾಗಲೇ 40,000 ಕೋಟಿ ರೂ.ವನ್ನು ಕೊಟ್ಟಿದ್ದೇವೆ. ಆದ್ದರಿಂದ ಅವರಿಗೆ ಇದನ್ನು ಡೈಜೆಸ್ಟ್ ಮಾಡಿಕೊಳ್ಳೋಕೆ ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ..

ಇಂದು ಬ್ಯಾಂಕರ್ಸ್ ಜೊತೆಯೂ ಮಾತನಾಡಿದ್ದೇವೆ. ಅದನ್ನು ಅವರ ಕೈಯಲ್ಲಿ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಅಸೆಂಬ್ಲಿಯಲ್ಲಿ ಯಡಿಯೂರಪ್ಪ ಅವರು, ಯಾವ ಬ್ಯಾಂಕ್ ಅವರು ಅಷ್ಟು ಗ್ಯಾರಂಟಿಯ ಮೇಲೆ ಸಾಲ ಕೊಡುತ್ತಾರೆ ಎಂದು ಕೇಳುತ್ತಿದ್ದರು. ಜೊತೆಗೆ ಬ್ಯಾಂಕ್ ಅವರ ಜೊತೆ ಅವರು ಮಾತನಾಡಿ ಇದು ಯಶಸ್ವಿಯಾಗುತ್ತಿದೆ ಎಂದು ತಿಳಿದ ಮೇಲೆ ಜನರನ್ನು ತಪ್ಪು ದಾರಿಗೆ ಎಳೆದುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಜೆಟ್ ಆಗಿ ಇನ್ನು ಒಂದು ತಿಂಗಳಾಗಿಲ್ಲ. ರೈತರು ಸದ್ಯಕ್ಕೆ ಖುಷಿಯಲ್ಲಿದ್ದಾರೆ. ಇದನ್ನ ತಪ್ಪಿಸಲು ರೈತರಿಗೆ ವಿಷದ ಬೀಜ ಬಿತ್ತುತ್ತಿದ್ದಾರೆ. ಇದು ಇಡೀ ನಮ್ಮ ರಾಜ್ಯ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅತೀ ದೊಡ್ಡ ಮಾರಕ ಅಂತ ಆಕ್ರೋಶದಿಂದ ಹೇಳಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ರಾಮನಗರದಿಂದ ಈ ಪಾದಯಾತ್ರೆ ಆರಂಭವಾಗಿದ್ದು, ಇಂದು ಬೆಂಗಳೂರಿಗೆ ಆಗಮನವಾಗಿದೆ. ಬಿಜೆಪಿ ಹಾಗೂ ರೈತ ಸಂಘಟನೆ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಕೆಂಗೇರಿಯ ಬಂಡೆ ಮಠದಿಂದ ಪಾದಯಾತ್ರೆ ಪ್ರಾರಂಭವಾಗಿ ಮಧ್ಯಾಹ್ನ ಫ್ರೀಡಂ ಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಿದೆ. ಈ ಪಾದಯಾತ್ರೆಯಲ್ಲಿ ನೂರಾರು ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago