ಹಾಲಾಡಿ ಶ್ರೀನಿವಾಸ ಶೆಟ್ಟಿ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ತ್ಯಜಿಸಿ ಪಕ್ಷೇತರರಾಗಿ ಬಿಜೆಪಿ ವಿರುದ್ದವೇ ಗೆದ್ದು ಬಂದಿದ್ದರು. ಇದೀಗ ಮತ್ತೆ ವಲಸಿಗರಾಗಿ ಬಿಜೆಪಿ ಸೇರಿರುವ ಹಾಲಾಡಿ ಮತ್ತೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಈ ವೇಳೆ ಯಡಿಯೂರಪ್ಪ ಸ್ವತಃ ಬಹಿರಂಗವಾಗಿ ಹಾಲಾಡಿಯೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿದ್ರು ಇದು ಭಿನ್ನಮತಕ್ಕೆ ಮತ್ತಷ್ಟು ತುಪ್ಪ ಸುರಿದ ಕ್ಷಣವಾಗಿತ್ತು, ಅಂದಿನಿಂದ ಬೂದಿ ಮುಚ್ಚಿದ್ದ ಈ ಭಿನ್ನಮತದ ಕಿಡಿ ಇದೀಗ ಸ್ಪೋಟಗೊಂಡು ಜಿಲ್ಲಾಬಿಜೆಪಿ ಅಧ್ಯಕ್ಷರಿಗೆ ಪದಾಧಿಕಾರಿಗಳು ರಾಜಿನಾಮೆ ನೀಡಿ ಹಾಲಾಡಿ ವಿರುದ್ದ ಪ್ರಚಾರ ಕೈಗೊಳ್ಳುವವರೆಗೆ ತಲುಪಿದೆ.
ಇದೀಗ ರಾಜಿನಾಮೆ ನೀಡಿದ ಪದಾಧಿಕಾರಿಗಳು ಹಾಲಾಡಿ ವಿರುದ್ಧ ಕೆಲಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ. ಬಿಜೆಪಿಯಲ್ಲಿ ಪಕ್ಷ ತೊರೆದು ಬಂದವರಿಗೆ ಮಾತ್ರ ಅವಕಾಶ ಸ್ಥಾನಮಾನದ ಹುದ್ದೆ ಸಿಗುತ್ತೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ ಎಂದು ರಾಜಿನಾಮೆ ನೀಡಿದ್ದ ಮೂಲ ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ.
ಒಟ್ಟಿನಲ್ಲಿ ಪರದೆ ಹಿಂದೆಯಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಭಿನ್ನಮತ ಇದೀಗ ಸ್ಪೋಟಗೊಂಡಿದ್ದು ಈ ಮೂಲಕ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಈ ಪಕ್ಷದ ಪದಾಧಿಕಾರಿಗಳೇ ರಾಜಿನಾಮೆ ನೀಡಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಲು ಹೊರಟಿರುವುದು ಪಕ್ಷಕ್ಕೆ ಅಡ್ಡಪರಿಣಾಮ ಆಗೋದ್ರಲ್ಲಿ ಎರಡು ಮಾತಿಲ್ಲ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…