ಉಡುಪಿ

ಹಾಲಾಡಿಗೆ ಬಿಜೆಪಿ ಟಿಕೆಟ್ : ರಾಜೀನಾಮೆ ನೀಡಿದ ಕುಂದಾಪುರದ ಬಿಜೆಪಿ ಕಾರ್ಯಕರ್ತರು, ಕುಂದಾಪುರ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ಉಡುಪಿ  : ವಲಸಿಗರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎಂಬ ಮೂಲ ಬಿಜೆಪಿಗರ ಪರದೆ ಹಿಂದಿನ ಭಿನ್ನಮತ ಇದೀಗ ಸ್ಪೋಟಗೊಂಡು ರಾಜಿನಾಮೆ ನೀಡುವ ವರೆಗೂ ತಲುಪಿದ್ದು ಕುಂದಾಪುರದಲ್ಲಿ ಬಿಜೆಪಿಗೆ ಈ ಭಿನ್ನಮತ ಅಡ್ಡಪರಿಣಾಮ ಆಗುವ ಎಲ್ಲಾ ಲಕ್ಷಣ ಗೋಚರಿಸ್ತಾಯಿದೆ.

ಕುಂದಾಪುರದ ವಾಜಪೇಯಿ ಎಂದೇ ಹೆಸರುಗಳಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಮೂಲ ಬಿಜೆಪಿಗರು ಮತ್ತೆ ತಿರುಗಿ ಬಿದ್ದಿದ್ದಾರೆ.  ಬೂದಿ ಮುಚ್ಚಿದ ಕೆಂಡದಂತೆ ಇದ್ದ ಹಾಲಾಡಿ ವಿರುದ್ಧದ ಅಸಮದಾನ ಇದೀಗ ದೊಡ್ಡ ಮಟ್ಟದಲ್ಲೇ ಸ್ಪೋಟ ಗೊಂಡಿದೆ. ಕುಂದಾಪುರದ ಬಿಜೆಪಿಯಲ್ಲಿ ಭಿನ್ನಮತ ಎಷ್ಟರ ಮಟ್ಟಿಗೆ ಭುಗಿಲೆದಿದೆ ಎಂದರೇ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ ಏಳು ಪದಾಧಿಕಾರಿಗಳು ರಾಜಿನಾಮೆ ನೀಡಿ ಹಾಲಾಡಿ ವಿರುದ್ದವೇ ಪ್ರಚಾರ ಮಾಡುವ ಶಪತ  ಕೈಗೊಂಡಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ತ್ಯಜಿಸಿ ಪಕ್ಷೇತರರಾಗಿ ಬಿಜೆಪಿ ವಿರುದ್ದವೇ ಗೆದ್ದು ಬಂದಿದ್ದರು. ಇದೀಗ ಮತ್ತೆ ವಲಸಿಗರಾಗಿ ಬಿಜೆಪಿ ಸೇರಿರುವ ಹಾಲಾಡಿ ಮತ್ತೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.


ಈ ವೇಳೆ ಯಡಿಯೂರಪ್ಪ ಸ್ವತಃ ಬಹಿರಂಗವಾಗಿ ಹಾಲಾಡಿಯೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿದ್ರು ಇದು ಭಿನ್ನಮತಕ್ಕೆ ಮತ್ತಷ್ಟು ತುಪ್ಪ ಸುರಿದ ಕ್ಷಣವಾಗಿತ್ತು, ಅಂದಿನಿಂದ ಬೂದಿ ಮುಚ್ಚಿದ್ದ ಈ ಭಿನ್ನಮತದ ಕಿಡಿ ಇದೀಗ ಸ್ಪೋಟಗೊಂಡು ಜಿಲ್ಲಾಬಿಜೆಪಿ ಅಧ್ಯಕ್ಷರಿಗೆ ಪದಾಧಿಕಾರಿಗಳು ರಾಜಿನಾಮೆ ನೀಡಿ ಹಾಲಾಡಿ ವಿರುದ್ದ ಪ್ರಚಾರ ಕೈಗೊಳ್ಳುವವರೆಗೆ ತಲುಪಿದೆ.

ಇದೀಗ ರಾಜಿನಾಮೆ ನೀಡಿದ ಪದಾಧಿಕಾರಿಗಳು ಹಾಲಾಡಿ ವಿರುದ್ಧ ಕೆಲಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ. ಬಿಜೆಪಿಯಲ್ಲಿ ಪಕ್ಷ ತೊರೆದು ಬಂದವರಿಗೆ ಮಾತ್ರ ಅವಕಾಶ ಸ್ಥಾನಮಾನದ ಹುದ್ದೆ ಸಿಗುತ್ತೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ ಎಂದು ರಾಜಿನಾಮೆ ನೀಡಿದ್ದ ಮೂಲ ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ.

ಒಟ್ಟಿನಲ್ಲಿ  ಪರದೆ ಹಿಂದೆಯಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಭಿನ್ನಮತ ಇದೀಗ ಸ್ಪೋಟಗೊಂಡಿದ್ದು ಈ ಮೂಲಕ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಈ ಪಕ್ಷದ ಪದಾಧಿಕಾರಿಗಳೇ ರಾಜಿನಾಮೆ ನೀಡಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಲು ಹೊರಟಿರುವುದು ಪಕ್ಷಕ್ಕೆ ಅಡ್ಡಪರಿಣಾಮ ಆಗೋದ್ರಲ್ಲಿ ಎರಡು ಮಾತಿಲ್ಲ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

5 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago