ಉಡುಪಿ: ಐದು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಪ್ರಾಮಾಣಿಕವಾಗಿದ್ದು ಕೊಂಡು ಕುಂದಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಲು ಕಾರಣರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರನ್ನು ಒತ್ತಾಯಿಸಿದೆ.
ಈ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಾಡಿ ಅಭಿಮಾನಿ ಬಳಗದ ಸುಶಾಂತ್ ಅಚ್ಲಾಡಿ 1999 ರಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಸೋಲಿಸುವುದರ ಮೂಲಕ ಕುಂದಾಪುರದಲ್ಲಿ ಬಿಜೆಪಿ ಪಕ್ಷದ ಧ್ವಜ ಅರಳಲು ಕಾರಣರಾದವರು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು. ಪ್ರತಿ ಬಾರಿಯ ಚುನಾವಣೆಯಲ್ಲಿ ಮತಗಳ ಅಂತರ ದುಪ್ಪಟ್ಟುಆಗುತ್ತಿರುವುದು ಅವರ ಸೇವಾ ಮನೋಭಾವ ಹಾಗೂ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ.
ಪ್ರಬಲ ಸಮುದಾಯದ ಶಾಸಕರಾದರೂ ಕೂಡ ಎಂದಿಗೂ ಕೂಡ ಜಾತಿ ರಾಜಕೀಯ ಮಾಡದೆ, ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಲಾಬಿ ಅವರು ಮಾಡಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಯಾರ ಕಾಲಿಗೂ ಬಿದ್ದವರಲ್ಲ ತಾನಾಯಿತು ತನ್ನ ಜನ ಸೇವೆಯಾಯಿತು ಎಂದು ಮೌನವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಒಮ್ಮೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕೊನೆಯ ಕ್ಷಣದಲ್ಲಿ ಅವರಿಗೆ ಕೈ ತಪ್ಪಿತ್ತು. ಈ ಹಿಂದೆ ಮಾಡಿದ ತಪ್ಪನ್ನು ಈ ಬಾರಿ ತಿದ್ದಿಕೊಳ್ಳಲು ಬಿಜೆಪಿಗೆ ಒಂದು ಅವಕಾಶವಿದ್ದು, ಹಾಲಾಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಹಾಲಾಡಿಯವರು ಒಮ್ಮೆಯಾದರೂ ಸಚಿವರಾಗಬೇಕು ಎನ್ನುವುದು ಅವರ ಲಕ್ಷಾಂತರ ಅಭಿಮಾನಿಗಳ ಆಸೆಯಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಯೋಗಿಶ್, ಕೀರ್ತೀಶ್ ಪೂಜಾರಿ ಕೋಟ, ತೀರ್ಥನ್ ದೇವಾಡಿಗ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…