ಉಡುಪಿ: ಐದು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಪ್ರಾಮಾಣಿಕವಾಗಿದ್ದು ಕೊಂಡು ಕುಂದಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಲು ಕಾರಣರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರನ್ನು ಒತ್ತಾಯಿಸಿದೆ.
ಈ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಾಡಿ ಅಭಿಮಾನಿ ಬಳಗದ ಸುಶಾಂತ್ ಅಚ್ಲಾಡಿ 1999 ರಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಸೋಲಿಸುವುದರ ಮೂಲಕ ಕುಂದಾಪುರದಲ್ಲಿ ಬಿಜೆಪಿ ಪಕ್ಷದ ಧ್ವಜ ಅರಳಲು ಕಾರಣರಾದವರು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು. ಪ್ರತಿ ಬಾರಿಯ ಚುನಾವಣೆಯಲ್ಲಿ ಮತಗಳ ಅಂತರ ದುಪ್ಪಟ್ಟುಆಗುತ್ತಿರುವುದು ಅವರ ಸೇವಾ ಮನೋಭಾವ ಹಾಗೂ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ.
ಪ್ರಬಲ ಸಮುದಾಯದ ಶಾಸಕರಾದರೂ ಕೂಡ ಎಂದಿಗೂ ಕೂಡ ಜಾತಿ ರಾಜಕೀಯ ಮಾಡದೆ, ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಲಾಬಿ ಅವರು ಮಾಡಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಯಾರ ಕಾಲಿಗೂ ಬಿದ್ದವರಲ್ಲ ತಾನಾಯಿತು ತನ್ನ ಜನ ಸೇವೆಯಾಯಿತು ಎಂದು ಮೌನವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಒಮ್ಮೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕೊನೆಯ ಕ್ಷಣದಲ್ಲಿ ಅವರಿಗೆ ಕೈ ತಪ್ಪಿತ್ತು. ಈ ಹಿಂದೆ ಮಾಡಿದ ತಪ್ಪನ್ನು ಈ ಬಾರಿ ತಿದ್ದಿಕೊಳ್ಳಲು ಬಿಜೆಪಿಗೆ ಒಂದು ಅವಕಾಶವಿದ್ದು, ಹಾಲಾಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಹಾಲಾಡಿಯವರು ಒಮ್ಮೆಯಾದರೂ ಸಚಿವರಾಗಬೇಕು ಎನ್ನುವುದು ಅವರ ಲಕ್ಷಾಂತರ ಅಭಿಮಾನಿಗಳ ಆಸೆಯಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಯೋಗಿಶ್, ಕೀರ್ತೀಶ್ ಪೂಜಾರಿ ಕೋಟ, ತೀರ್ಥನ್ ದೇವಾಡಿಗ ಉಪಸ್ಥಿತರಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…