Featured

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಒತ್ತಾಯ -Vishwanews24

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಒತ್ತಾಯ -Vishwanews24

ಉಡುಪಿ: ಐದು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಪ್ರಾಮಾಣಿಕವಾಗಿದ್ದು ಕೊಂಡು ಕುಂದಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಲು ಕಾರಣರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರನ್ನು ಒತ್ತಾಯಿಸಿದೆ.

ಈ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಾಡಿ ಅಭಿಮಾನಿ ಬಳಗದ ಸುಶಾಂತ್‌ ಅಚ್ಲಾಡಿ 1999 ರಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಭಾವಿ ನಾಯಕ ಪ್ರತಾಪ್‌ ಚಂದ್ರ ಶೆಟ್ಟಿಯವರನ್ನು ಸೋಲಿಸುವುದರ ಮೂಲಕ ಕುಂದಾಪುರದಲ್ಲಿ ಬಿಜೆಪಿ ಪಕ್ಷದ ಧ್ವಜ ಅರಳಲು ಕಾರಣರಾದವರು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು. ಪ್ರತಿ ಬಾರಿಯ ಚುನಾವಣೆಯಲ್ಲಿ ಮತಗಳ ಅಂತರ ದುಪ್ಪಟ್ಟುಆಗುತ್ತಿರುವುದು ಅವರ ಸೇವಾ ಮನೋಭಾವ ಹಾಗೂ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ.

ಪ್ರಬಲ ಸಮುದಾಯದ ಶಾಸಕರಾದರೂ ಕೂಡ ಎಂದಿಗೂ ಕೂಡ ಜಾತಿ ರಾಜಕೀಯ ಮಾಡದೆ, ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಲಾಬಿ ಅವರು ಮಾಡಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಯಾರ ಕಾಲಿಗೂ ಬಿದ್ದವರಲ್ಲ ತಾನಾಯಿತು ತನ್ನ ಜನ ಸೇವೆಯಾಯಿತು ಎಂದು ಮೌನವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಒಮ್ಮೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕೊನೆಯ ಕ್ಷಣದಲ್ಲಿ ಅವರಿಗೆ ಕೈ ತಪ್ಪಿತ್ತು. ಈ ಹಿಂದೆ ಮಾಡಿದ ತಪ್ಪನ್ನು ಈ ಬಾರಿ ತಿದ್ದಿಕೊಳ್ಳಲು ಬಿಜೆಪಿಗೆ ಒಂದು ಅವಕಾಶವಿದ್ದು, ಹಾಲಾಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಹಾಲಾಡಿಯವರು ಒಮ್ಮೆಯಾದರೂ ಸಚಿವರಾಗಬೇಕು ಎನ್ನುವುದು ಅವರ ಲಕ್ಷಾಂತರ ಅಭಿಮಾನಿಗಳ ಆಸೆಯಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಯೋಗಿಶ್‌, ಕೀರ್ತೀಶ್‌ ಪೂಜಾರಿ ಕೋಟ, ತೀರ್ಥನ್‌ ದೇವಾಡಿಗ ಉಪಸ್ಥಿತರಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

48 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

52 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

1 hour ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago