Featured

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಒತ್ತಾಯ -Vishwanews24

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಒತ್ತಾಯ -Vishwanews24

ಉಡುಪಿ: ಐದು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಪ್ರಾಮಾಣಿಕವಾಗಿದ್ದು ಕೊಂಡು ಕುಂದಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಲು ಕಾರಣರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿ ಬಳಗ ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರನ್ನು ಒತ್ತಾಯಿಸಿದೆ.

ಈ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಾಡಿ ಅಭಿಮಾನಿ ಬಳಗದ ಸುಶಾಂತ್‌ ಅಚ್ಲಾಡಿ 1999 ರಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಭಾವಿ ನಾಯಕ ಪ್ರತಾಪ್‌ ಚಂದ್ರ ಶೆಟ್ಟಿಯವರನ್ನು ಸೋಲಿಸುವುದರ ಮೂಲಕ ಕುಂದಾಪುರದಲ್ಲಿ ಬಿಜೆಪಿ ಪಕ್ಷದ ಧ್ವಜ ಅರಳಲು ಕಾರಣರಾದವರು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು. ಪ್ರತಿ ಬಾರಿಯ ಚುನಾವಣೆಯಲ್ಲಿ ಮತಗಳ ಅಂತರ ದುಪ್ಪಟ್ಟುಆಗುತ್ತಿರುವುದು ಅವರ ಸೇವಾ ಮನೋಭಾವ ಹಾಗೂ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ.

ಪ್ರಬಲ ಸಮುದಾಯದ ಶಾಸಕರಾದರೂ ಕೂಡ ಎಂದಿಗೂ ಕೂಡ ಜಾತಿ ರಾಜಕೀಯ ಮಾಡದೆ, ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಲಾಬಿ ಅವರು ಮಾಡಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಯಾರ ಕಾಲಿಗೂ ಬಿದ್ದವರಲ್ಲ ತಾನಾಯಿತು ತನ್ನ ಜನ ಸೇವೆಯಾಯಿತು ಎಂದು ಮೌನವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಒಮ್ಮೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕೊನೆಯ ಕ್ಷಣದಲ್ಲಿ ಅವರಿಗೆ ಕೈ ತಪ್ಪಿತ್ತು. ಈ ಹಿಂದೆ ಮಾಡಿದ ತಪ್ಪನ್ನು ಈ ಬಾರಿ ತಿದ್ದಿಕೊಳ್ಳಲು ಬಿಜೆಪಿಗೆ ಒಂದು ಅವಕಾಶವಿದ್ದು, ಹಾಲಾಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಹಾಲಾಡಿಯವರು ಒಮ್ಮೆಯಾದರೂ ಸಚಿವರಾಗಬೇಕು ಎನ್ನುವುದು ಅವರ ಲಕ್ಷಾಂತರ ಅಭಿಮಾನಿಗಳ ಆಸೆಯಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಯೋಗಿಶ್‌, ಕೀರ್ತೀಶ್‌ ಪೂಜಾರಿ ಕೋಟ, ತೀರ್ಥನ್‌ ದೇವಾಡಿಗ ಉಪಸ್ಥಿತರಿದ್ದರು.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

1 hour ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

3 hours ago