ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ ಸಂಪಾದಿಸಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಆಘಾತಕಾರಿ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ಎಂಬಾತನ ವಂಚನೆ ಪ್ರಕರಣ ಮಾಸುವ ಬೆನ್ನಲ್ಲೇ ಹಾವೇರಿಯಲ್ಲೂ ಅಮಾಯಕರಿಗೆ ವಂಚಿಸಿರೋ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ನಗರದ ಅಶ್ವಿನಿ ನಗರದಲ್ಲಿ `ಎಸ್ಎಲ್ವಿ ಮಹಿಳಾ ಮಾರ್ಟ್ ಅಂಡ್ ಮಾರ್ಕೆಟಿಂಗ್’ ಹೆಸರಲ್ಲಿ ಕಚೇರಿ ತೆರೆದು ವರ್ಕ್ ಫ್ರಮ್ ಹೋಮ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಮಹಿಳೆಯರಿಗೆ ವಂಚಿಸಿದ್ದಾರೆ. ಹಣ ಕಳೆದುಕೊಂಡವರು ನ್ಯಾಯಕೊಡಿಸುವಂತೆ ಠಾಣೆ ಮೆಟ್ಟಿಲೇರಿದ್ದಾರೆ. ಕೋಟ್ಯಾಂತರ ರೂಪಾಯಿ ವಂಚಿಸಿದ ವಿನಾಯಕ ಅನ್ವೇರಿ ಹಾಗೂ ರಮ್ಯಾ ಎಂಬುವವರು ಕಚೇರಿಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ:
ಇನ್ನೂ ಹಾವೇರಿಯ ಈ ಖತರ್ನಾಕ್ ಜೋಡಿ ಅಗರಬತ್ತಿ, ಮೇಣದ ಬತ್ತಿ, ಕರ್ಪೂರ, ಧೂಪ, ಇತರೆ ಸಾಮಗ್ರಿಗಳನ್ನು ಕೊಡುತ್ತೇವೆ. ನೀವು ಅದನ್ನು ಮನೆಯಲ್ಲೇ ಪ್ಯಾಕಿಂಗ್ ಮಾಡಿಕೊಡಬೇಕು. ರಾಜ್ಯದಲ್ಲಿ ನಮ್ಮದು 9 ಶಾಖೆಗಳಿವೆ, ಕನಿಷ್ಠ 25 ಸಾವಿರ ರೂ.ನಿಂದ 5 ಲಕ್ಷ ರೂ.ವರೆಗೆ ಡೆಪಾಸಿಟ್ ಇಡಬೇಕು. ಒಂದು ಲಕ್ಷಕ್ಕೆ ಪ್ರತಿ ತಿಂಗಳಿಗೆ 26 ಸಾವಿರ ರೂ. ಆದಾಯ ಕೊಡುತ್ತೇವೆ ಎಂದು ನಂಬಿಸಿ ಮೋಸ ಮಾಡಿದ್ದಾರೆ. ಅಂದಾಜು 10 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ನೊಂದ ಮಹಿಳೆಯರು ಆರೋಪಿಸ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…