ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಸಾವು -Vishwanews24
ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಚನ್ನರಾಯಪಟ್ಟನದ ಹಿರಿಸಾವೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ನಲ್ಲಿ 45 ಜನ ಪ್ರಯಾಣಿಕರಿದ್ದು, ಇದರಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ಮುಂಜಾನೆಯ ವೇಳೆ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಅಭಿಷೇಕ್ ಅವರಿಗೆ ಬೆಂಗಳೂರಿನಲ್ಲಿನ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕಿದ್ದು ಅವರು ಇಂದು ಕೆಲಸಕ್ಕೆ ಸೇರಬೇಕಾಗಿತ್ತು. ಇತ್ತೀಚೆಗೆ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು.
ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರ ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದ. ತಮ್ಮನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
