ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಚನ್ನರಾಯಪಟ್ಟನದ ಹಿರಿಸಾವೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ನಲ್ಲಿ 45 ಜನ ಪ್ರಯಾಣಿಕರಿದ್ದು, ಇದರಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ಮುಂಜಾನೆಯ ವೇಳೆ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಅಭಿಷೇಕ್ ಅವರಿಗೆ ಬೆಂಗಳೂರಿನಲ್ಲಿನ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕಿದ್ದು ಅವರು ಇಂದು ಕೆಲಸಕ್ಕೆ ಸೇರಬೇಕಾಗಿತ್ತು. ಇತ್ತೀಚೆಗೆ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು.
ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರ ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದ. ತಮ್ಮನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…