ಹಾಸನ: ಹಾಸನದ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಾಯಿತು. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ, ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಹಾಸನಾಂಬ ಜಾತ್ರೆಗೆ ಕೆಲವು ದಿನಗಳಿಂದ ಸಿದ್ಧತೆಗಳು ಭರದಿಂದ ಸಾಗಿದ್ದವು. ಸದ್ಯ ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸುತ್ತಿದೆ.
ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆ
ಕಳೆದ ಬಾರಿ ಶಕ್ತಿ ಯೋಜನೆಯ ಪರಿಣಾಮ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಹಾಗು ಭಕ್ತರು ಆಗಮಿಸಿದ್ದರು. ಬರೊಬ್ಬರಿ 14 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಹಾಗಾಗಿ ಈ ವರ್ಷ ಕೂಡ ಸುಮಾರು 20ರಿಂದ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯೊಂದಿಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 10 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ, ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಗಣ್ಯರು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿಶೇಷ ದರ್ಶನಕ್ಕೆ ಪಾಸ್ ಪಡೆಯುವವರು, ಹಣ ನೀಡಿ ವಿಶೇಷ ಪಾಸ್ ಪಡೆದು ದರ್ಶನ ಮಾಡ ಬಯಸುವವರಿಗಾಗಿ ಕ್ಯೂ ಆರ್ ಕೋಡ್ ಒಳಗೊಂಡ ಪಾಸ್ ಮಾಡಲಾಗಿದ್ದು ಅವರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಸುವ ಸಾಧ್ಯತೆ ಹಿನ್ನೆಲೆಯಲ್ಲಿ ದಿನದ 24 ಗಂಟೆಯೂ ಕೂಡ ದೇವಿ ದರ್ಶನಕ್ಕೆ ಅವಕಾಶ ಇದ್ದು, ಅದಕ್ಕಾಗಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲಿಪೊಲೀಸರು ಕಂದಾಯ ಇಲಾಖೆ ಸಿಬ್ಬಂದಿ, ಹಾಗೂ ಸ್ವಯಂಸೇವಕರನ್ನು ಸನ್ನದ್ಧಗೊಳಿಸಲಾಗಿದೆ.
ಹಾಸನಾಂಬ ದರ್ಶನ ಸಮಯ
ಸಾಮಾನ್ಯವಾಗಿ ಹಾಸನಾಂಬ ದೇಗುಲದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಾರಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರವಲ್ಲದೆ, ನೈವೇದ್ಯದ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಅವಧಿಯಲ್ಲೂ (ದಿನ ಪೂರ್ತಿ) ದರ್ಶನಕ್ಕೆ ಅವಕಾಶವಿದೆ.
ನೇರ ದರ್ಶನಕ್ಕೆ 1000 ರೂ. ಟಿಕೆಟ್
ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ದೇಗುಲವನ್ನು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಇಡೀ ದೇಗುಲದ ಆವರಣ ನಳ ನಳಿಸುವಂತೆ ಮಾಡಲಾಗಿದೆ. ಹಲವು ಹೈಟೆಕ್ ವ್ಯವಸ್ಥೆಗಳೊಂದಿಗೆ ಈ ವರ್ಷದ ಹಾಸನಾಂಬೆ ಉತ್ಸವ ಆರಂಭವಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…