ಹಾಸನ: ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಹಾಸನ: ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಬುಧವಾರ ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು.
ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.
ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.
ಇದೇ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…