ಹಾಸನ: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ತಾಲ್ಲೂಕಿನ ಯೋಗೀಹಳ್ಳಿ ಅರಣ್ಯದಲ್ಲಿ ಬುಧವಾರ ಪತ್ತೆಯಾಗಿದೆ. ಕೊಲೆ ಮಾಡಿ ಶವವನ್ನು ಅರಣ್ಯದಲ್ಲಿ ಎಸೆಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಲಿಖಿತ್ಗೌಡ ಅಲಿಯಾಸ್ ಬಂಗಾರಿ (26) ಕೊಲೆಯಾದ ಯುವಕ.
ಬೆಳಿಗ್ಗೆಯಿಂದ ತೀವ್ರ ಶೋಧ ಕಾರ್ಯ ನಡೆಸಿದ ನೂರಕ್ಕೂ ಹೆಚ್ಚು ಪೊಲೀಸರಿಗೆ ಅರಣ್ಯದಲ್ಲಿ ಶವ ಸಿಕ್ಕಿದೆ.
ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ಲಿಖಿತ್ಗೌಡ ಎಂಟು ತಿಂಗಳ ಹಿಂದೆ ವಿವಾಹವಾಗಿದ್ದ. ಲಿಖಿತ್ಗೌಡನಿಂದ ನವೀನ್ ₹ 2.5 ಲಕ್ಷ ಸಾಲ ಪಡೆದಿದ್ದ. ಸಾಲ ಹಿಂದಿರುಗಿಸದ್ದರಿಂದ ಲಿಖಿತ್ಗೌಡ ಹಾಗೂ ನವೀನ್ ನಡುವೆ ಜಗಳ ನಡೆದಿತ್ತು ಇದರಿಂದ ಕೋಪಗೊಂಡ ಲಿಖಿತ್ಗೌಡ ₹ 10 ಲಕ್ಷದ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಆಯಕ್ವಿವ್ ಹೋಂಡಾ ತೆಗೆದುಕೊಂಡು ಬಂದಿದ್ದ. ಇದು ವಿಕೋಪಕ್ಕೆ ತಿರುಗಿ ನವೀನ್ ಮತ್ತು ಲಿಖಿತ್ಗೌಡ ಮಧ್ಯೆ ಮತ್ತೆ ಜಗಳ ನಡೆದಿತ್ತು.
ಫೆ.5 ರಂದು ಸಂಜೆ ಹಣ ಕೊಡುವುದಾಗಿ ಹೇಳಿ ನವೀನ್ ಹಾಗೂ ಸಾಗರ್, ಲಿಖಿತ್ಗೌಡನನ್ನು ಕರೆದುಕೊಂಡು ಹೋಗಿದ್ದರು. ಅಂದಿನಿಂದ ಎಲ್ಲರ ಮೊಬೈಲ್ ಸ್ವಿಚ್ ಆಫ್ ಆಗಿತ್ತು.
ಇದರಿಂದ ಆತಂಕಗೊಂಡ ಲಿಖಿತ್ಗೌಡ ಪತ್ನಿ ಸಂಪ್ರೀತಾ ಹಾಗೂ ಕುಟುಂಬದವರು ನಗರದ ಬಡಾವಣೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶೋಧ ಕಾರ್ಯ ಆರಂಭಿಸಿದ್ದರು.
ಬುಧವಾರ ಬೆಳಿಗ್ಗೆ ಯೋಗೀಹಳ್ಳಿ ಅರಣ್ಯದಲ್ಲಿ ಯುವಕನ ಶವ ಇರುವ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಪೊಲೀಸರು, ಅದು ಲಿಖಿತ್ಗೌಡನ ಶವ ಎಂದು ಗುರುತಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…