Featured

ಹಾಸನ:  ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ; ಮಗು ಸಾವು -VIshwanews24

ಹಾಸನ:  ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ – ಮಗು ಸಾವು

ಹಾಸನ: ತಾಯಿಯೊಬ್ಬಳು ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದ‌  ಚಿಪ್ಪಿನಕಟ್ಟೆ ಬಡಾವಣೆಯಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.

ವಿಷ ಕುಡಿದಿದ್ದ ಆರಾನ್ (7) ಸಾವನ್ನಪ್ಪಿದ್ದು, ಸುನೈನಾ (6) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ, ಜೀನತ್‌ಬಾನು ಜಿಲ್ಲಾಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾಳೆ. 12 ವರ್ಷಗಳ ಹಿಂದೆ ಹಾಸನದ ಚಿಪ್ಪಿನಕಟ್ಟೆಯ ದಿಲ್‌ದಾರ್ ಜೊತೆ ಮಂಗಳೂರಿನ ಉಪ್ಪಿನಂಗಡಿ ಬಳಿಯ ಸತ್ತಿಗಲ್‌ ಮೂಲದ ಜೀನತ್‌ಬಾನು ವಿವಾಹವಾಗಿತ್ತು. ಮದುವೆಯಾದಗಿನಿಂದಲೂ ಆಕೆಯ ಪೋಷಕರು ಜೀನತ್‌ಬಾನುಳನ್ನು ನೋಡಲು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಜೀನತ್‌ಬಾನು ಹಾಲಿನಲ್ಲಿ ಇಲಿ ಪಾಷಾಣ ಬೆರಸಿ ತಾನು ಕುಡಿದು ಮಕ್ಕಳಿಗೆ ಕುಡಿಸಿದ್ದಾಳೆ.‌ ವಿಷ ಉಣಿಸಿರುವ ಬಗ್ಗೆ ಪತಿ, ಅತ್ತೆ, ಮಾವನಿಗೆ ಜೀನತ್‌ಬಾನು ತಿಳಿಸಿರಲಿಲ್ಲ.

ಜ.8 ರಂದು ಬೆಳಿಗ್ಗೆ ಆರಾನ್‌ಗೆ ವಾಂತಿ ಭೇದಿಯಾಗಿದ್ದು, ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಆರಾನ್ ಸಾವನ್ನಪ್ಪಿದ್ದಾನೆ.‌ ಆದರೂ ವಿಷ ಉಣಿಸಿರುವ ಬಗ್ಗೆ ತಾಯಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಫುಡ್ ಪಾಯ್ಸನ್‌ನಿಂದ ಮಗು ಮೃತಪಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ನಂತರ ವಲ್ಲಭಭಾಯಿ ರಸ್ತೆಯಲ್ಲಿರುವ ಖಬ್ರಸ್ತಾನ್‌‌ನಲ್ಲಿ ಆರಾನ್ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದಾದ ಬಳಿಕ ಸುನೈನಾ ಹಾಗೂ ಜೀನತ್‌ಬಾನುಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಈ ವೇಳೆ ವಿಷ ಉಣಿಸಿರುವ ಬಗ್ಗೆ ಜೀನತ್‌ಬಾನು ತನ್ನ ಪತಿ ಬಳಿ ಹೇಳಿದ್ದಾಳೆ.

ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀನತ್‌ಬಾನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಸುನೈನಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹಾಸನ ತಹಸೀಲ್ದಾರ್ ಸಂತೋಷ್ ಸಮ್ಮುಖದಲ್ಲಿ ಹೂತಿದ್ದ ಆರಾನ್ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.‌ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೀನತ್‌ಬಾನು ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago