ಹಾಸನ: ತಾಯಿಯೊಬ್ಬಳು ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದ ಚಿಪ್ಪಿನಕಟ್ಟೆ ಬಡಾವಣೆಯಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.
ವಿಷ ಕುಡಿದಿದ್ದ ಆರಾನ್ (7) ಸಾವನ್ನಪ್ಪಿದ್ದು, ಸುನೈನಾ (6) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ, ಜೀನತ್ಬಾನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 12 ವರ್ಷಗಳ ಹಿಂದೆ ಹಾಸನದ ಚಿಪ್ಪಿನಕಟ್ಟೆಯ ದಿಲ್ದಾರ್ ಜೊತೆ ಮಂಗಳೂರಿನ ಉಪ್ಪಿನಂಗಡಿ ಬಳಿಯ ಸತ್ತಿಗಲ್ ಮೂಲದ ಜೀನತ್ಬಾನು ವಿವಾಹವಾಗಿತ್ತು. ಮದುವೆಯಾದಗಿನಿಂದಲೂ ಆಕೆಯ ಪೋಷಕರು ಜೀನತ್ಬಾನುಳನ್ನು ನೋಡಲು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಜೀನತ್ಬಾನು ಹಾಲಿನಲ್ಲಿ ಇಲಿ ಪಾಷಾಣ ಬೆರಸಿ ತಾನು ಕುಡಿದು ಮಕ್ಕಳಿಗೆ ಕುಡಿಸಿದ್ದಾಳೆ. ವಿಷ ಉಣಿಸಿರುವ ಬಗ್ಗೆ ಪತಿ, ಅತ್ತೆ, ಮಾವನಿಗೆ ಜೀನತ್ಬಾನು ತಿಳಿಸಿರಲಿಲ್ಲ.
ಜ.8 ರಂದು ಬೆಳಿಗ್ಗೆ ಆರಾನ್ಗೆ ವಾಂತಿ ಭೇದಿಯಾಗಿದ್ದು, ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಆರಾನ್ ಸಾವನ್ನಪ್ಪಿದ್ದಾನೆ. ಆದರೂ ವಿಷ ಉಣಿಸಿರುವ ಬಗ್ಗೆ ತಾಯಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಫುಡ್ ಪಾಯ್ಸನ್ನಿಂದ ಮಗು ಮೃತಪಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ನಂತರ ವಲ್ಲಭಭಾಯಿ ರಸ್ತೆಯಲ್ಲಿರುವ ಖಬ್ರಸ್ತಾನ್ನಲ್ಲಿ ಆರಾನ್ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದಾದ ಬಳಿಕ ಸುನೈನಾ ಹಾಗೂ ಜೀನತ್ಬಾನುಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಈ ವೇಳೆ ವಿಷ ಉಣಿಸಿರುವ ಬಗ್ಗೆ ಜೀನತ್ಬಾನು ತನ್ನ ಪತಿ ಬಳಿ ಹೇಳಿದ್ದಾಳೆ.
ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀನತ್ಬಾನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಸುನೈನಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹಾಸನ ತಹಸೀಲ್ದಾರ್ ಸಂತೋಷ್ ಸಮ್ಮುಖದಲ್ಲಿ ಹೂತಿದ್ದ ಆರಾನ್ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೀನತ್ಬಾನು ವಿರುದ್ಧ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…