ಹಾಸನ :  ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24

Featured, ರಾಜ್ಯ ನ್ಯೂಸ್

ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಪಘಾತದಲ್ಲಿ ಹರ್ಷವರ್ಧನ್ ದುರಂತ ಅಂತ್ಯ

ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್  (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24

ಹರ್ಷವರ್ಧನ್​ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್​ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.

ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್​ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24

Leave a Reply